ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಜಿಲ್ಲೆಯ ಜನರಿಗೆ ಸತತ ಎರಡನೇ ದಿನವೂ ಶುಭ ಸುದ್ದಿ. ಹೌದು ನಿನ್ನೆ ಹಾಗೂ ಇಂದು ಸೋಂಕು ಇಳಿಮುಖದತ್ತ ಸಾಗುತ್ತಿದ್ದು ಜಿಲ್ಲೆಯ ಜನರಲ್ಲಿ ಇದ್ದ ಆತಂಕ ದೂರಾಗುತ್ತಿದೆ.
ಇಂದು 152 ಜನರಿಗೆ ಸೋಂಕು ತಗುಲಿದೆ. ಇಂದು ಜಿಲ್ಲಾಡಳಿತದ ಮಾಹಿತಿ ಪ್ರಕಾರ ನಾಲ್ವರು ಮೃತಪಟ್ಟಿದ್ದಾರೆ.
ಇಂದಿನ 152 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 24661 ಕ್ಕೆ ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -70, ಮುಂಡರಗಿ-16, ನರಗುಂದ-06, ರೋಣ-28, ಶಿರಹಟ್ಟಿ-29, ಹೊರಜಿಲ್ಲೆಯ-03 ಸೇರಿದಂತೆ 152 ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 269 ಕ್ಕೇರಿದೆ.
ಜಿಲ್ಲೆಯ ಮುಂಡರಗಿ ಕಲಕೇರಿ ಗ್ರಾಮದ ನಿವಾಸಿ 64 ವರ್ಷದ ವ್ಯಕ್ತಿ ಜೂನ್- 03 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಜೂನ -05 ರಂದು ಮೃತಪಟ್ಟಿದ್ದಾರೆ.
ಮುಂಡರಗಿ ತಾಲೂಕಿನ ಹಮ್ಮಗಿ ನಿವಾಸಿ ನಿವಾಸಿ 80 ವರ್ಷದ ವ್ಯಕ್ತಿ ಮೆ-29 ರಂದು ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಜೂನ್ 01 ರಂದು ಮೃತಪಟ್ಟಿದ್ದಾರೆ.
ಧಾರವಾಡ ಜಿಲ್ಲೆಯ ಅಣ್ಣಿಗೇರಿ ನಿವಾಸಿ 40 ವರ್ಷದ ವ್ಯಕ್ತಿ ಮೇ-23 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಜೂನ್ 03 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಗದಗ ತಾಲೂಕಿನ ಕುರ್ತಕೋಟಿ ನಿವಾಸಿ 45 ವರ್ಷದ ವ್ಯಕ್ತಿ ಮೇ -30 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್- 03 ರಂದು ಮೃತಪಟ್ಟಿದ್ದಾರೆ.
ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು 328 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 22489 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 1903 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 187 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.