ಕೊರೋನಾ ಹಾವಳಿ; ಜಿಲ್ಲಾಡಳಿತಕ್ಕೆ ಸಹಕಾರ ನೀಡಲು ಸಾರ್ವಜನಿಕರಲ್ಲಿ ಸೈಯದ್ ಖಾಲಿದ ಕೊಪ್ಪಳ ಮನವಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಸಾಮಾಜಿಕ ಅಂತರ ಕಾಪಾಡಿ ಜಿಲ್ಲಾಡಳಿತಕ್ಕೆ ಸಂಪೂರ್ಣ ಬೆಂಬಲ ನೀಡಲು ಸಾರ್ವಜನಿಕರಲ್ಲಿ ಸಾಮಾಜಿಕ ಕಾರ್ಯಕರ್ತ ಸಯ್ಯದ್ ಖಾಲಿದ್ ಕೊಪ್ಪಳ ವಿನಂತಿ ಮಾಡಿಕೊಂಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಕೊಪ್ಪಳ, ದೇಶದಲ್ಲಿ ಕೊರೋನಾ ಎರಡನೇ ಅಲೆ ಬಂದಿದ್ದು ಸಾಮಾನ್ಯ ಜನರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಸಂಪೂರ್ಣವಾಗಿ ಸಹಕಾರ ನೀಡಬೇಕು, ಜನರು ತಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ಎರಡನೇ ಅಲೆಯನ್ನು ಹಿಮ್ಮೆಟ್ಟಿಸಲು ಜಿಲ್ಲಾಡಳಿತಕ್ಕೆ ಸಂಪೂರ್ಣ ಸಹಕಾರ ನೀಡಿ ಕೈ ಜೋಡಿಸಬೇಕು ಎಂದು ಸಯ್ಯದ್ ಖಾಲಿದ್ ಕೊಪ್ಪಳ ಮನವಿ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here