ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ
Advertisement
ಶಿರಹಟ್ಟಿಯ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಇತ್ತೀಚಿಗಷ್ಟೇ ಕೋವಿಡ್ ಆರೈಕೆ ಕೇಂದ್ರ ಪ್ರಾರಂಭವಾಗಿತ್ತು. ರೋಡ್ ವರ್ಕ್ ಮಾಡುವಂತಹ ಖಾಸಗಿ ಇಂಜಿನಿಯರ್ ಒಬ್ಬರಿಗೆ ಮೇ 20 ರಂದು ಸೋಂಕು ದೃಢ ಪಟ್ಟಿದ್ದರಿಂದ ಆರೈಕೆ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು, ಆದರೆ ಸೋಂಕಿತ ವ್ಯಕ್ತಿ ಮೇ 21 ರಂದು ಮಧ್ಯಾಹ್ನ 3.30 ರ ಸುಮಾರಿಗೆ ಊಟ ಮಾಡಿದ ನಂತರ ಆರೈಕೆ ಕೇಂದ್ರದಲ್ಲಿ ಇರುವಂತಹ ಸಿಬ್ಬಂದಿಗಳ ಮರೆಮಾಚಿ ಪರಾರಿಯಾಗಿದ್ದಾನೆ.
ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ನಂತರ ಸೋಂಕಿತ ವ್ಯಕ್ತಿ ಪರಾರಿಯಾಗಿರುವುದು ಖಚಿತಗೊಂಡಿದೆ.
ಕಂದಾಯ ನಿರೀಕ್ಷಕ ಮಹಾಂತೇಶ ಮಗದುಮ್ ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಸೋಂಕಿತ ವ್ಯಕ್ತಿ ಪರಾರಿಯಾದ ಬಗ್ಗೆ ದೂರು ನೀಡಿದ್ದಾರೆ