ವಿಜಯಸಾಕ್ಷಿ ಸುದ್ದಿ, ಗದಗ
Advertisement
ಎಲ್ಲೆಡೆ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಸರಕಾರ ಹಾಗೂ ಜಿಲ್ಲಾಡಳಿತ ಎಷ್ಟೇ ಕಟ್ಟು ನಿಟ್ಟಿನ ಕ್ರಮ ಕೈಗೊಂಡರು ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಮಾಸ್ಕ್, ಸ್ಯಾನಿಟೇಸರ್ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಾನೂನು ರೂಪಿಸಿದರೂ ಅದನ್ನು ಜನರು ಉಲ್ಲಂಘನೆ ಮಾಡೋದು ಸಾಮಾನ್ಯವಾಗಿದೆ.
ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಭವಾನಿ ಹೋಟೆಲ್ ಮಾಲೀಕ ಮಂಜುನಾಥ್ ಬಸಪ್ಪ ಬಗಾಡೆ ಎಂಬುವವರು ತಮ್ಮ ಹೋಟೆಲ್ ನಲ್ಲಿ ಗ್ರಾಹಕರಿಗೆ ಕೋವಿಡ್ ಕಾನೂನು ಉಲ್ಲಂಘಿಸಿ ಊಟ ಸೇರಿದಂತೆ ಮತ್ತೀತರ ವ್ಯವಸ್ಥೆ ಮಾಡಿದ್ದರು.

ಭವಾನಿ ಹೋಟೆಲ್ ಮಾಲೀಕ ಮಂಜುನಾಥ್ ಬಸಪ್ಪ ಬಗಾಡೆ ಎಂಬುವವರು ಮೇಲೆ ಕೋವಿಡ್ ಹರಡಲು ಕಾರಣವಾಗಿದ್ದಕ್ಕೆ ಐಪಿಸಿ 1860 (U/s-269, 270) ಪ್ರಕರಣ ದಾಖಲಿಸಲಾಗಿದೆ.
ಲಕ್ಷ್ಮೇಶ್ವರ ಪಿಎಸ್ಐ ಎಸ್ ವೈ ಲೋಹಾರ ಪ್ರಕರಣ ದಾಖಲಿಸಕೊಂಡು ತನಿಖೆ ನಡೆಸಿದ್ದಾರೆ.