- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶ್ರೀನಿವಾಸ ಪೂಜಾರಿ ಹೇಳಿಕೆ
ವಿಜಯಸಾಕ್ಷಿ ಸುದ್ದಿ, ಗದಗ
ಕೋವಿಡ್ ಮಾರ್ಗಸೂಚಿ ಅನುಸರಿಸಿ ರಾಜ್ಯದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅವಕಾಶ ಮಾಡಿಕೊಡಲು ಚಿಂತನೆ ನಡೆದಿದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಣೇಶ ಹಬ್ಬ ಆಚರಣೆ ಬಗ್ಗೆ ಮುಖ್ಯಮಂತ್ರಿ ಈಗಾಗಲೆ ಸಭೆ ನಡೆಸುವುದಾಗಿ ಹೇಳಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿ ಸೂತ್ರ ತರುವುದಾಗಿ ತಿಳಿಸಿದ್ದಾರೆ.
ಸಮಾರಂಭ ಮಾಡುವಾಗ ಕೋವಿಡ್ ಮಾರ್ಗಸೂಚಿ ಪ್ರಕಾರ ಮಾಡಬೇಕಾಗುತ್ತದೆ ಎಂದು ಹೇಳಿದರು.
ಅರುಣ್ ಸಿಂಗ್ ದುಡ್ಡು ವಸೂಲಿಗೆ ರಾಜ್ಯಕ್ಕೆ ಬಂದಿದ್ದಾರೆಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಸಚಿವರು, ಆರೋಪ ಮಾಡುವವರಿಗೆ ಆ ವಿಚಾರ ಗೊತ್ತಿರಬಹುದು. ಆದರೆ, ನಮ್ಮ ಪಕ್ಷದಲ್ಲಿ ಆ ಸಿಸ್ಟಮ್ ಇಲ್ಲ. ಕುಮಾರಸ್ವಾಮಿ, ಸಿದ್ಧರಾಮಯ್ಯ ನವರು ನಮ್ಮ ಪಕ್ಷವನ್ನು ಹೊಗಳುತ್ತಾರೆ ಎಂಬ ಭ್ರಮೆ ನಮಗಿಲ್ಲ.
ಅವರ ಅನಾರೋಗ್ಯಕರ ಟೀಕೆಗೆ ಅದೇ ವೇದಿಕೆಯಲ್ಲಿ ಉತ್ತರ ನೀಡುತ್ತೇವೆ. ಸರ್ಕಾರಿ ಕೆಲಸ ಇಲ್ಲಿ ಉತ್ತರ ಬೇಡ ಬೇರೆ ಸಂದರ್ಭದಲ್ಲಿ ಉತ್ತರಿಸುವೆ ಎಂದರು.
ವಿದ್ಯಾರ್ಥಿ ವೇತನ ಬಿಡುಗಡೆಯಾಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಶ್ರೀನಿವಾಸ ಪೂಜಾರಿ, ಪ್ರೋತ್ಸಾಹ ಧನ ಬಂದಿಲ್ಲ ಎಂಬುದು ತಿಳಿದು ಬಂದಿದೆ. ಅಧಿಕಾರಿಗಳ ಜೊತೆ ಸಭೆ ನಡೆಸಿದ್ದೇನೆ. ಜಿಲ್ಲಾವಾರು ಪ್ರೋತ್ಸಾಹ ಧನ ಬಿಡುಗಡೆಗೆ ಸಮಸ್ಯೆಯಾಗಿದೆ. ಸಭೆ ನಡೆಸಿ ಬಗೆಹರಿಸುತ್ತೇನೆ ಎಂದು ತಿಳಿಸಿದರು.