ವಿಜಯಸಾಕ್ಷಿ ಸುದ್ದಿ, ಗದಗ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ತುಮಕೂರು ಹಿರಿಯ ಸಹಾಯಕ ನಿರ್ದೇಶಕ ಡಿ. ಮಂಜುನಾಥ ಅವರು ಭಾನುವಾರ ಮಹಾಮಾರಿಗೆ ಬಲಿಯಾಗಿದ್ದಾರೆ. ಅವರ ನಿಧನಕ್ಕೆ ವಾರ್ತಾ ಇಲಾಖೆ ಸಚಿವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರಾದ ಡಿ. ಮಂಜುನಾಥ (42) ಅವರಿಗೆ ಇತ್ತೀಚೆಗೆ ಸೋಂಕು ದೃಢ ಪಟ್ಟಿತ್ತು. ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರವಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಕರಿಣಿಸಲಿ ಎಂದು ವಾರ್ತಾ ಸಚಿವ ಸಿ.ಸಿ. ಪಾಟೀಲ ಕೋರಿದ್ದಾರೆ.
ಮೃತರು ತುಮಕೂರು ಜಿಲ್ಲೆಯಲ್ಲಿ ಕಳೆದ 5 ವರ್ಷಗಳಿಂದ ವಾರ್ತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಬೆಂಗಳೂರಿನ ವಿಶ್ವ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ರು.
ತುಮಕೂರು ಜಿಲ್ಲೆಯಲ್ಲಿ ಮಾ. 2016ರಿಂದ ವಾರ್ತಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ನಗು ಮುಗದಿ ಎಲ್ಲರ ಸ್ನೇಹ ಸಂಬಂಧಗಳನ್ನು ಬೆಳೆಸಿಕೊಂಡಿದ್ದ ಅವರು, ನಮ್ಮನ್ನು ಅಗಲಿದ್ದು ತುಂಬಾ ನೋವಿನ ಸಂಗತಿಯಾಗಿದೆ.
ಮೃತರು ಪತ್ನಿ ಸವಿತ, ಒಂದು ಮಗು ಸೇರಿದಂತೆ ತಂದೆ ತಾಯಿ, ಸಹೋದರ, ಸಹೋದರಿಯರು ಹಾಗೂ ಇತರೆ ಬಂಧು ಬಳಗವನ್ನು ಅಗಲಿದ್ದಾರೆ. ಆ ದೇವರು ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲೆಂದು ಪತ್ರಕರ್ತರು, ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ.