HomeChikkamagaluruಖೋಟಾ ನೋಟು ಚಲಾವಣೆಗೆ ಯತ್ನ: ₹18 ಸಾವಿರ ನಕಲಿ ಕರೆನ್ಸಿಯೊಂದಿಗೆ ಇಬ್ಬರ ಬಂಧನ

ಖೋಟಾ ನೋಟು ಚಲಾವಣೆಗೆ ಯತ್ನ: ₹18 ಸಾವಿರ ನಕಲಿ ಕರೆನ್ಸಿಯೊಂದಿಗೆ ಇಬ್ಬರ ಬಂಧನ

For Dai;y Updates Join Our whatsapp Group

ಚಿಕ್ಕಮಗಳೂರು: ಖೋಟಾ ನೋಟು ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸರು ಬಂಧಿಸಿದ್ದು, ಅವರಿಂದ ₹18 ಸಾವಿರ ಮುಖಬೆಲೆಯ ನಕಲಿ ಕರೆನ್ಸಿ ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ಮಂಗಳೂರಿನ ಮಹಮದ್ ಅಲಿ ಹಾಗೂ ಮೂಡಿಗೆರೆಯ ಮಹೇಶ್ ಎಂದು ಗುರುತಿಸಲಾಗಿದೆ. ಮೂಡಿಗೆರೆ ಪಟ್ಟಣದ ನೂತನ ಲೇಔಟ್ ಪ್ರದೇಶದಲ್ಲಿ ಖೋಟಾ ನೋಟುಗಳನ್ನು ಚಲಾವಣೆಗೆ ತರಲು ಯತ್ನಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಆರೋಪಿಗಳಿಂದ ₹200 ಮುಖಬೆಲೆಯ ಒಟ್ಟು 90 ಖೋಟಾ ನೋಟುಗಳು, ಅಂದರೆ ₹18 ಸಾವಿರ ಮೌಲ್ಯದ ನಕಲಿ ಕರೆನ್ಸಿ ಪತ್ತೆಯಾಗಿದೆ. ವಿಶೇಷವೆಂದರೆ, ನೋಟುಗಳ ಮೇಲೆ “Reserve Bank of India” ಬದಲಾಗಿ “Bisarv Bank of India” ಎಂದು ಮುದ್ರಿಸಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖೋಟಾ ನೋಟುಗಳ ಮೂಲ ಹಾಗೂ ಜಾಲದ ಹಿಂದೆ ಇರುವವರ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img