ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಾಲುಜಾರಿ ಯುವಕ ನೀರುಪಾಲು

0
Spread the love

ವಿಜಯಸಾಕ್ಷಿ ಸುದ್ದಿ, ಕಲಬುರ್ಗಿ

Advertisement

ಸ್ನೇಹಿತನೊಂದಿಗೆ ಗಣೇಶ ಮೂರ್ತಿ ವಿಸರ್ಜನೆಗೆ ಭೀಮಾ ನದಿಗೆ ತೆರಳಿದ್ದ ಯುವಕ ನೀರು ಪಾಲಾದ ಘಟನೆ ಜೀವರ್ಗಿ ತಾಲೂಕಿನ ಅಂಕಲಗಾ ತಾಂಡಾದಲ್ಲಿ ಸಂಭವಿಸಿದೆ. ತಾಂಡಾ ನಿವಾಸಿ ಗಿರೀಶ್ ಜಯರಾಮ ಚವ್ಹಾಣ (21) ಮೃತ ಯುವಕ.

ತಾಂಡಾದಲ್ಲಿ ಪ್ರತಿಷ್ಠಾಪಿಸಿದ್ದ ಸಾರ್ವಜನಿಕ ಗಣೇಶ ಮೂರ್ತಿಯನ್ನು ವಿಸರ್ಜನೆಗೆಂದು ಐವರು ಸ್ನೇಹಿತರೊಂದಿಗೆ ಭೀಮಾ ತೀರಕ್ಕೆ ಹೋಗಿದ್ದು, ಮೂರ್ತಿಯನ್ನು ನದಿಯಲ್ಲಿ ವಿಸರ್ಜನೆ ಮಾಡುವಾಗ ಕಾಲುಜಾರಿ ನದಿಗೆ ಬಿದ್ದಿದ್ದಾನೆ. ಯುವಕನ ಶವಕ್ಕಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಜೀವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here