ವಿಜಯಸಾಕ್ಷಿ ಸುದ್ದಿ, ಗದಗ:
ಮುಳಗುಂದ ನಾಕಾ ಸಮೀಪದ ಕೋಳಿಕೇರಿ ಕ್ರಾಸ್ ಬಳಿ ಗುರುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ 19 ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿವೆ.
ಸಿದ್ದರಾಮೇಶ್ವರ ನಗರದ ನಿವಾಸಿಯಾಗಿರುವ ರಾಜೇಸಾಬ ಬಸರಿಗಿಡದ ಎಂಬುವವರಿಗೆ ಸೇರಿದ ಗ್ಯಾರೇಜ್ ನಲ್ಲಿ ಅಗ್ನಿ ದುರಂತ ನಡೆದಿದೆ.
ಗ್ಯಾರೇಜ್ ಮುಂಭಾಗದಲ್ಲಿ ನಿಲ್ಲಿಸಿದ್ದ ಯೋಗ್ಯವಾಗಿದ್ದ 4 ಮತ್ತು ಗುಜರಿಗೆ ಸೇರಿದ್ದ 15 ಸೇರಿ 19 ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿವೆ. ಅದರಂತೆ, ಗ್ಯಾರೇಜ್ ಹಿಂದೆ ಹಿಂದಿನ ಶೆಡ್ ನಲ್ಲಿನ ಸಿಮೆಂಟ್, ಬಾರ್ ಬೈಂಡಿಂಗ್ ವೈಯರ್ ಸುಟ್ಟಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.

ಇನ್ನು ಗ್ಯಾರೇಜ್ ಪಕ್ಕ ವಿದ್ಯುತ್ ಟಿಸಿ ಇದ್ದು, ಕಿಡಿ ಬಿದ್ದು ಅಗ್ನಿ ಅವಘಡ ಸಂಭವಿಸಿರಬಹುದು. ಇಲ್ಲದಿದ್ದರೆ, ಶಾರ್ಟ್ಸರ್ಕ್ಯೂಟ್ನಿಂದ ಅಗ್ನಿ ದುರಂತ ಸಂಭವಿಸಿರಬಹುದು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.



