ಗದಗನಲ್ಲಿ ಎಗ್ಗಿಲ್ಲದೇ ಸಾಗಿದ ಇಸ್ಪೀಟು, ಮಟ್ಕಾದಂಧೆ: ಜಿ.ಎಸ್.ಪಾಟೀಲ್ ವಿಷಾದ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ:

Advertisement

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ನನ್ನ ಜೀವನದಲ್ಲಿಯೇ ಇಂತಹ ಅವ್ಯವಸ್ಥೆ ನಾನೆಂದಿಗೂ ನೋಡಿರಲಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್.ಪಾಟೀಲ್ ವಿಷಾದ ವ್ಯಕ್ತಪಡಿಸಿದರು.

ಶನಿವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಾದ್ಯಂತ ಎಲ್ಲೆಂದರಲ್ಲಿ ಇಸ್ಪೀಟು ಅಡ್ಡೆಗಳು ತಲೆ ಎತ್ತಿವೆ. ಅಲ್ಲದೇ, ಮಟ್ಕಾದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಇದರಿಂದ ಗ್ರಾಮೀಣ, ನಗರ ಪ್ರದೇಶದ ಬಹುತೇಕ ಜನರು ಜೂಜಾಟಕ್ಕೆ ಬಲಿಯಾಗುತ್ತಿದ್ದಾರೆ ಎಂದರು.

ಅದರಂತೆ, ಕಿರಾಣಿ, ಹೋಟೆಲ್ ಸೇರಿದಂತೆ ಇನ್ನಿತರ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದರೂ
ಅಬಕಾರಿ ಇಲಾಖೆ ಅಕ್ರಮ ಸಾರಾಯಿ ಮಾರಾಟ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ.
ಇನ್ನು ಅಕ್ರಮ ಮರಳು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸರ್ಕಾರ ಇಂತಹ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಜಿ.ಎಸ್.ಪಾಟೀಲ್ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಶಹರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರಣ್ಣ ಬಳಗಾನೂರ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಮಂದಾಲಿ, ಎಸ್ ಸಿ ಘಟಕದ ಜಿಲ್ಲಾಧ್ಯಕ್ಷ ಬಸವರಾಜ್ ಕಡೆಮನಿ, ಬಸವರಾಜ್ ಶೀಲವಂತರ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಉಮರ್ ಪಾರೂಕ್ ಹುಬ್ಬಳ್ಳಿ ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here