ವಿಜಯಸಾಕ್ಷಿ ಸುದ್ದಿ, ಗದಗ: ಸಾರಿಗೆ ನೌಕರರ ಸತತ 6 ದಿನದ ಮುಷ್ಕರದ ನಡುವೆ ಇಂದು ಗದಗನಿಂದ ಕೆಲ ಬಸ್ ಗಳ ಸಂಚಾರ ಆರಂಭವಾಗಿದೆ. ಗದಗನ ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಬಸ್ ನಿಲ್ದಾಣದಿಂದ 20 ಬಸ್ ಗಳ ಸಂಚಾರ ಆರಂಭಗೊಂಡಿದೆ.
ಗದಗ- ಹುಬ್ಬಳ್ಳಿ ಹಾಗೂ ಗದಗ- ಮುಂಡರಗಿ ಮಾರ್ಗವಾಗಿ ಮಾತ್ರ ಈ ಬಸ್ ಗಳು ಸಂಚಾರ ಆರಂಭಿಸಿದ್ದು, ಗ್ರಾಮೀಣ ಭಾಗಕ್ಕಿನ್ನೂ ಬಸ್ ವ್ಯವಸ್ಥೆ ಆಗಿಲ್ಲ. ಹೀಗಾಗಿ ಗದಗ ಜಿಲ್ಲಾ ಕೇಂದ್ರದಿಂದ ಗ್ರಾಮೀಣ ಭಾಗಕ್ಕೆ ಹೋಗಲು ಪ್ರಯಾಣಿಕರು ಪರದಾಡುತ್ತಿದ್ದಾರೆ.
ಅನಿವಾರ್ಯವಾಗಿ ಖಾಸಗಿ ವಾಹನಗಳ ಮೂಲಕವೇ ಪ್ರಯಾಣ ಮಾಡುತ್ತಿದ್ದು, ಗ್ರಾಮೀಣ ಭಾಗಕ್ಕೂ ಸಹ ಬಸ್ ಸಂಚಾರ ಆರಂಭವಾಗಲಿ ಎಂದು ಒತ್ತಾಯಿಸುತ್ತಿದ್ದಾರೆ.



