HomeGadag Newsಗದಗ ಜಿಲ್ಲೆಯಲ್ಲಿ ಜೂನ್ 14 ರವರೆಗೆ ನಿಷೇಧಾಜ್ಞೆ; ಡಿಸಿ

ಗದಗ ಜಿಲ್ಲೆಯಲ್ಲಿ ಜೂನ್ 14 ರವರೆಗೆ ನಿಷೇಧಾಜ್ಞೆ; ಡಿಸಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ

ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಪ್ರಕಟಿಸಿದ ಮಾರ್ಗಸೂಚಿಗಳು ಜೂನ್ 7ರ ಬೆಳಗ್ಗೆ 6 ಗಂಟೆಯಿಂದ ಜೂನ್ 14 ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿವೆ.

ಈ ಅವಧಿಯಲ್ಲಿ ಕೆಳಕಂಡಂತೆ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಗದಗ ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ.
ಸಾರ್ವಜನಿಕರು ಈ ಮಾರ್ಗಸೂಚಿಗಳ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

ಬೆ. 6 ರಿಂದ ಬೆ 10 ಗಂಟೆಯವರೆಗೆ ಮಾಂಸ ಮತ್ತು ಹೈನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆಗಳು , ಆಹಾರ ಸಾಮಗ್ರಿ, ದಿನಸಿ, ಮಾಂಸ ಮತ್ತು ಮೀನಿನ ಮಳಿಗೆಗಳು ಮತ್ತು ಪಶು ಆಹಾರದ ಮಳಿಗೆಗಳು, ಹಾಲಿನ ಬೂತ್, ಮದ್ಯ ಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಅವಕಾಶ ಕಲ್ಪಿಸಲಾಗಿದೆ.

ಬೆಳಿಗ್ಗೆ 6 ರಿಂದ 12 ಗಂಟೆಯವರೆಗೆ ರೈತರಿಗೆ ಅಗತ್ಯವಿರುವ ಬೀಜ,ಗೊಬ್ಬರ, ಕೀಟನಾಶಕ, ಯಂತ್ರೋಪಕರಣ ಖರೀದಿಗಾಗಿ ಅವಕಾಶ ಕಲ್ಪಿಸಲಾಗಿದೆ.

ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ತಳ್ಳುಗಾಡಿ, ಆಟೋ, ಟಂಟಂಗಳಲ್ಲಿ ಬೀದಿ ಸುತ್ತುವ ಮೂಲಕ ಹಣ್ಣು, ತರಕಾರಿ ಮಾರಾಟಕ್ಕೆ ಅವಕಾಶ.

ನಿಗದಿಯಾಗಿರುವ ವಿಮಾನ ಮತ್ತು ರೈಲುಗಳು, ಟ್ಯಾಕ್ಸಿ , ಅಟೋ, ರಿಕ್ಷಾಗಳು ತುರ್ತು ಸಂದರ್ಭಗಳಲ್ಲಿ ಹಾಗೂ ಮಾರ್ಗಸೂಚಿಯಲ್ಲಿ ಅನುಮತಿಸಿದ ರೀತಿಯಲ್ಲಿ ಎಲ್ಲ ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ ಇದೆ.

ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಮಳಿಗೆಗಳು , ಪಾರ್ಸೆಲ್ ಹಾಗೂ ಹೋಂ ಡಿಲೆವರಿ ಸೇವೆ ಮಾತ್ರ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳು ಮಾತ್ರ ಕಾರ್ಯನಿರ್ವಹಿಸಲಿವೆ.

ಎಲ್ಲ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸಂಬಂಧಿತ ಸೇವೆ, ಮೀನುಗಾರಿಕೆ, ಕೋಳಿ ಸಾಕಾಣಿಕೆ, ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆಗೆ, ದೂರ ಸಂಪರ್ಕ, ಇಂಟರ್ ನೆಟ್ , ಪ್ರಸಾರ ಮತ್ತು ಕೆಬಲ್ ಸೇವೆಗಳು, ಐಟಿ ಮತ್ತು ಐಟಿಇಎಸ್ ಕಂಪನಿಗಳ ಅಗತ್ಯ ಸಿಬ್ಬಂದಿ ಮಾತ್ರ ಕಚೇರಿಗಳಲ್ಲಿ ಕಾರ್ಯ; (ಇತರ ಸಿಬ್ಬಂದಿ ಮನೆಯಿಂದಲೇ ಕಾರ್ಯ ನಿರ್ವಹಿಸಬೇಕು) ಸ್ಥಳದಲ್ಲಿಯೇ ಕಾರ್ಮಿಕರು/ ಸಿಬ್ಬಂದಿ ಲಭ್ಯವಿರುವ ಕೈಗಾರಿಕೆಗಳು/ ಉತ್ಪಾದನಾ ಘಟಕಗಳು ಸ್ಥಳದಲ್ಲಿಯೇ ಕಾರ್ಮಿಕರು, ಕೆಲಸಗಾರರನ್ನು ಹೊಂದಿರುವ ನಿರ್ಮಾಣ ಚಟುವಟಿಕೆ ಹಾಗೂ ರಸ್ತೆ ಕಾಮಗಾರಿ, ಅಗತ್ಯ ವಸ್ತುಗಳ ತಯಾರಿಕಾ ಘಟಕ; ನಿರಂತರ ಕಾರ್ಯನಿರ್ವಹಣೆಯ ಅಗತ್ಯವಿರುವ ತಯಾರಿಕಾ ಘಟಕ, ನ್ಯಾಯಬೆಲೆ ಅಂಗಡಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅಂತ್ಯ ಸಂಸ್ಕಾರದಲ್ಲಿ ಗರಿಷ್ಟ 5 ಜನರಿಗೆ, ಮದುವೆ ಸಮಾರಂಭಗಳಲ್ಲಿ ಗರಿಷ್ಟ 40 ಜನರಿಗೆ ಅವಕಾಶ ಕಲ್ಪಿಸಲಾಗಿದೆ.

ಈ ಕೆಳಗಿನವುಗಳಿಗೆ ಅವಕಾಶವಿಲ್ಲ

ಬಸ್, ಮೆಟ್ರೋ ರೈಲು ಸಂಚಾರ, ಶಾಲೆ, ಕಾಲೇಜುಗಳು, ಶಿಕ್ಷಣ/ ಕೋಚಿಂಗ್ ಸಂಸ್ಥೆಗಳ ತರಗತಿಗಳು, ಸಿನೆಮಾ ಹಾಲ್, ಶಾಪಿಂಗ್ ಮಾಲ್, ಜಿಮ್ನೇಸಿಯಂಗಳು, ಕ್ರೀಡಾ ಸಂಕೀರ್ಣಗಳು , ಕ್ರೀಡಾಂಗಣ, ಈಜುಗೊಳ, ಉದ್ಯಾನವನಗಳು, ಮನರಂಜನಾ ಪಾರ್ಕ್, ಕ್ಲಬ್ , ಥಿಯೇಟರ್ , ಬಾರ್ ಮತ್ತು ಸಭಾಂಗಣ, ಸಮುದಾಯ ಭವನಗಳಂತಹ ಸ್ಥಳಗಳು ಮುಚ್ಚಲಿವೆ.

ಎಲ್ಲ ಸಾಮಾಜಿಕ , ರಾಜಕೀಯ , ಕ್ರೀಡೆ , ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ದಾರ್ಮಿಕ ಕಾರ್ಯಕ್ರಮಗಳು ಮೊದಲಾದ ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳು, ಸಮಾವೇಶಗಳ ನಿಷೇಧ, ಎಲ್ಲ ಧಾರ್ಮಿಕ ಸ್ಥಳಗಳು / ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ, ಸಾರ್ವಜನಿಕರ ಓಡಾಟ ಕಡ್ಡಾಯವಾಗಿ ನಿಷೇಧ (ಕೆಲವು ವಿನಾಯಿತಿಗಳನ್ನು ಮಾತ್ರ ನೀಡಲಾಗಿದೆ) ಮಾರ್ಗಸೂಚಿಯಲ್ಲಿ ಅನುಮತಿಸಿದ ಸಂದರ್ಭಗಳನ್ನು ಹೊರತುಪಡಿಸಿ, ಸರ್ಕಾರಿ ಹಾಗೂ ಖಾಸಗಿ ಬಸ್‍ಗಳು ಹಾಗೂ ಇತರ ಪ್ರಯಾಣಿಕ ವಾಹನಗಳ ಸಂಚಾರವನ್ನು ನಿಷೇಧಿಸಿದೆ.

ಪ್ರತಿಬಂಧಕಾಜ್ಞೆ ಜಾರಿ

ಗದಗ ಜಿಲ್ಲೆಯಾದ್ಯಂತ ಕೋವಿಡ್-19 ವೈರಸ್ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ 1973 , ಸಾಂಕ್ರಾಮಿಕ ರೋಗ ಕಾಯ್ದೆ 1897 ದಿ ಕರ್ನಾಟಕ ಎಪಿಡಮಿಕ್ ಡಿಸೀಸ್ ಕೋವಿಡ್-19 ರೆಗ್ಯುಲೇಷನ್ 2020 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಪ್ರಕಾರ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಮುಖಗವಸುಗಳನ್ನು ಧರಿಸುವಿಕೆ, ಕೈಗಳನ್ನು ಶುಚಿಯಾಗಿಡುವಿಕೆ, ಮತ್ತು ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಕೋವಿಡ್-19 ಸರಪಳಿಯನ್ನು ತುಂಡಿರಿಸಲು ಆದೇಶದಲ್ಲಿ ಅವಕಾಶ ನೀಡಿದ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡಿದೆ. ಆದೇಶದಲ್ಲಿ ಹೊರಡಿಸಿರುವ ಷರತ್ತುಗಳಿಗೆ ಒಳಪಟ್ಟು ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜೂನ 7 ರ ಬೆಳಗಿನ 6 ಗಂಟೆಯವರೆಗೆ ಜಾರಿಗೊಳಿಸಲಾದ ಪ್ರತಿಬಂಧಕಾಜ್ಞೆಯನ್ನು ಜೂನ್ 14 ಬೆಳಗಿನ 6 ಗಂಟೆಯವರೆಗೆ ಮುಂದುವರೆಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!