HomeGadag Newsಪಂ.ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ; ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಪಂ.ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ; ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

Spread the love

ವಿಜಯಸಾಕ್ಷಿ ಸುದ್ದಿ, ಗದಗ:

ಗದುಗಿನ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ಥಾಪಿಸಿ ಆದೇಶಿಸಿದ್ದು, ಸದರಿ ಪ್ರಶಸ್ತಿ ಆಯ್ಕೆ ಉಪ ಸಮಿತಿಗೆ ಅಳವಡಿಸಬೇಕಾದ ಅಂಶ ಹಾಗೂ ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

ಈ ಪ್ರಶಸ್ತಿಯು ರಾಷ್ಟ್ರೀಯ ಪ್ರಶಸ್ತಿಯಾಗಿದ್ದು, ದಕ್ಷಿಣಾಧಿ ಮತ್ತು ಹಿಂದುಸ್ತಾನಿ ಸಂಗೀತಗಳಲ್ಲಿ ಪರಿಣಿತಿಯನ್ನು ಹೊಂದಿ ಉಭಯಗಾನ ವಿಶಾರದರೆಂಬ ಖ್ಯಾತಿಯನ್ನು ಪಡೆದಿದ್ದ ಗಾನಯೋಗಿ ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ಸ್ಥಾಪಿಸಲಾಗಿದೆ ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಗಾಯನ ಮತ್ತು ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕನಿಷ್ಟ ೨೫ ರಿಂದ ೩೦ ವರ್ಷ ಮೇಲ್ಪಟ್ಟು ಸಾಧನೆ ಮಾಡಿದ ಕಲಾವಿದರಿಗೆ ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತದೆ. ಅಲ್ಲದೆ, ಈ ಪ್ರಶಸ್ತಿಯನ್ನು ಒಂದು ವರ್ಷ ರಾಜ್ಯದ ಕಲಾವಿದರಿಗೆ, ನಂತರದ ಒಂದು ವರ್ಷ ರಾಜ್ಯದ ಯಾವುದೇ ಹೊರ ರಾಜ್ಯದ ಕಲಾವಿದರಿಗೆ ನೀಡಿ ಪುರಸ್ಕರಿಸಲಾಗುತ್ತದೆ.

ಗಾನಯೋಗಿ ಪಂಡಿತ ಪಂಚಾಕ್ಷರಿ ಗವಾಯಿ ರಾಷ್ಟ್ರೀಯ ಪ್ರಶಸ್ತಿಯು ೧೦ಲಕ್ಷ ರೂ. ಮೊತ್ತಗಳನ್ನೊಳಗೊಂಡಿರಲಿದ್ದು, ಪ್ರಶಸ್ತಿ ಸ್ಮರಣಿಕೆ, ಪ್ರಶಸ್ತಿ ಫಲಕ ಒಳಗೊಂಡಿರಲಿದೆ.

ಸದರಿ ಪ್ರಶಸ್ತಿಯನ್ನು ಪ್ರತಿವರ್ಷ ಫೆಬ್ರುವರಿ ೨ರಂದು ಶ್ರೀಗಳ ಜನ್ಮದಿನದಂದು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರದ ನಿರ್ಧರಿಸುವ ಸ್ಥಳಗಳಲ್ಲಿ ಸಮಾರಂಭ ಏರ್ಪಡಿಸುವ ಮೂಲಕ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಅಲ್ಲದೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಡಮಾಡುವ ಇತರ ವಾರ್ಷಿಕ ಪ್ರಶಸ್ತಿಗಳ ಸಾಮಾನ್ಯ ನಿಯಮಾವಳಿಗಳು ಈ ಪ್ರಶಸ್ತಿಗಳಿಗೂ ಅನ್ವಯವಾಗಲಿದೆ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ಇನ್ನು ರಾಜ್ಯ ಸರ್ಕಾರ ಪಂಚಾಕ್ಷರಿ ಗವಾಯಿಗಳ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪಿಸಿ ಆದೇಶಿಸಿದ್ದಕ್ಕೆ, ವೀರೇಶ್ವರ ಪುಣ್ಯಾಶ್ರಮದ ಮಠದ ಭಕ್ತರಲ್ಲಿ ಹರ್ಷವನ್ನುಂಟು ಮಾಡಿದ್ದು, ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಅವರು ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸಿ, ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಪ್ರಶಸ್ತಿ ಆಯ್ಕೆ ಉಪಸಮಿತಿಯ ಅಂಶಗಳು

  • ಹಿಂದೂಸ್ಮಾನಿ ಶಾಸ್ತ್ರೀಯ ಸಂಗೀತ ಮತ್ತು ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಸಾಧನೆಗೈದ ಹಿರಿಯ ಸಾಧಕರು ಅಧ್ಯಕ್ಷರಾಗಿರಬೇಕು.
  • ಹಿಂದೂಸ್ಥಾನಿ ಶಾಸ್ತ್ರೀಯ ಸಂಗೀತ ಮತ್ತು ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಸಾಧನೆ ಮಾಡಿದ ಹಿರಿಯ ಇಬ್ಬರು ಸಾಧಕರು ಸದಸ್ಯರಾಗಿರಬೇಕು.
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರು ಪದನಿಮಿತ್ತ ಸದಸ್ಯರಾಗಿರುತ್ತಾರೆ.
  • ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕರು ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ.
  • ಸಮಿತಿಯಲ್ಲಿ ಒಬ್ಬರು ಮಹಿಳಾ ಸದಸ್ಯರು ಕಡ್ಡಾಯವಾಗಿರಬೇಕು.
  • ಸಭೆಯ ಕನಿಷ್ಠ ಕೋರಮ್ ೧/೩ ಆಗಿರಬೇಕು.

Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!