ವಿಜಯಸಾಕ್ಷಿ ಸುದ್ದಿ, ಗದಗ
Advertisement
ಜಿಲ್ಲೆಯಾದ್ಯಂತ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಗುಡುಗು ಮಿಂಚು ಬಿರುಗಾಳಿ ಸಹಿತ ವರುಣ ಆರ್ಭಟಿಸಿದ್ದಾನೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ಗ್ರಾಮದಲ್ಲಿ ತೆಂಗಿನ ಮರ ಹೊತ್ತಿ ಉರಿದಿದೆ.
ಡೋಣಿ ಗ್ರಾಮದ ಹೊರವಯದಲ್ಲಿರುವ ಡಿ ಇ ಪಿ ಶಾಲೆ ಹತಿರ ಮಲ್ಲಪ ಕಡಕೋಳ ಅವರಿಗೆ ಸೇರಿದ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿದೆ. ಅದೃಷ್ಟವಶಾತ್ ಯಾರಿಗೂ ಪ್ರಾಣಹಾನಿ ಸಂಭವಿಸಿಲ್ಲ.
ಆದರೆ ಮರಕ್ಕೆ ಸಿಡಿಲು ಬಡಿಯುತ್ತಿದ್ದಂತೆ ಗ್ರಾಮದಲ್ಲಿ ದೊಡ್ಡದಾದ ಶಬ್ಧ ಕೇಳಿದ ತಕ್ಷಣ ಎಲ್ಲರೂ ಬೆಚ್ಚಿಬಿದ್ದಿದ್ದಾರೆ. ತೆಂಗಿನ ಮರಕ್ಕೆ ಹೊತ್ತಿದ ಬೆಂಕಿಯನ್ನು ನಂದಿಸಲು ಸ್ಥಳೀಯರು ಹರಸಾಹಸ ಪಟ್ಟರು.