ವಿಜಯಸಾಕ್ಷಿ ಸುದ್ದಿ, ರೋಣ
Advertisement
ರೋಣ ತಾಲೂಕಿನ ವಿವಿಧೆಡೆ ಶುಕ್ರವಾರ ಸಾಯಂಕಾಲ ಗುಡುಗು- ಸಿಡಿಲು ಸಹಿತ ಧಾರಾಕಾರವಾಗಿ ಮಳೆ ಸುರಿದಿದೆ. ಈ ಸಂದರ್ಭದಲ್ಲಿ ಜಮೀನಿನಲ್ಲಿ ಕೃಷಿ ಕೆಲಸದಲ್ಲಿ ನಿರತವಾಗಿದ್ದ ಮಹಿಳೆ ಒಬ್ಬರು ಸಿಡಿಲು ಅಪ್ಪಳಿಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತಾಲ್ಲೂಕಿನ ಮಾಡಲಗೇರಿ ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ನೈನಾಪೂರ ಗ್ರಾಮದ ರೇಖಾ ಭೀಮಪ್ಪ ನಂದಿಕೇಶ್ವರ(20) ಎಂದು ಗುರುತಿಸಲಾಗಿದೆ. ಜಮೀನನಲ್ಲಿ ಶೇಂಗಾ ಕಟಾವು ಕೆಲಸದಲ್ಲಿ ರೇಖಾ ನಿರತರಾಗಿದ್ದರು.
ಸಾಯಂಕಾಲ ಗುಡುಗು ಸಿಡಿಲು ಸಹಿತ ಮಳೆ ಸುರಿಯಲು ಆರಂಭವಾಗಿದೆ. ಈ ವೇಳೆ ಸಿಡಿಲು ಬಡಿದ ಪರಿಣಾಮ ಮಹಿಳೆ ರೇಖಾ ದುರ್ಮಣಕ್ಕೆ ತುತ್ತಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮ ಲೆಕ್ಕಾಧಿಕಾರಿ ಕನೋಜ್ ಕೂಡ ಭೇಟಿ ನೀಡಿದ್ದಾರೆ. ಈ ಕುರಿತು ರೋಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.