ವಿಜಯಸಾಕ್ಷಿ ಸುದ್ದಿ, ಗದಗ
ಕ್ಷುಲ್ಲಕ ಕಾರಣಕ್ಕೆ ಹಾಲು ಮಾರಾಟ ಮಾಡುವ ವ್ಯಕ್ತಿಯೊಬ್ಬನಿಗೆ ಚಾಕು ಹಾಕಿದ ಘಟನೆ ಗದಗನಲ್ಲಿ ನಡೆದಿದೆ.
ಗದಗ ತಾಲೂಕಿನ ನರಸಾಪುರ ಗ್ರಾಮದಲ್ಲಿ ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು. ಹಾಲು ಮಾರಾಟಗಾರ ಸೋಮನಗೌಡ ಕೊಳ್ಳಿ ಇರಿತಕ್ಕೊಳಗಾದ ವ್ಯಕ್ತಿ. ಆರೋಪಿ ಮಂಜುನಾಥ್ ಕುಬಸದ ಎಂಬಾತ ಚಾಕು ಹಾಕಿದಾತ.
ಒಂದೇ ಓಣಿಯ ನಿವಾಸಿಗಳಾದ ಸೋಮನಗೌಡ್ ಹಾಗೂ ಮಂಜುನಾಥ್ ನಿನ್ನೆ ತಡರಾತ್ರಿ ಕುಡಿದ ನಸೆಯಲ್ಲಿದ್ದಾಗ ಕ್ಷುಲ್ಲಕ ಕಾರಣಕ್ಕೆ ಜಗಳಕ್ಕೆ ಇಳಿದಿದ್ದಾರೆ. ಜಗಳ ವಿಕೋಪಕ್ಕೆ ಹೋಗಿದೆ. ಆಗ ಸಿಟ್ಟಿಗೆದ್ದ ಯುವಕ ಮಂಜುನಾಥ ಚಾಕು ಇರಿದು ಪರಾರಿಯಾಗಿದ್ದ.
ಘಟನೆಯ ಮಾಹಿತಿ ಪಡೆದ ಬೆಟಗೇರಿ ಠಾಣೆಯ ಪಿಎಸ್ಐ ರಾಜೇಶ್ ಬಟಗುರ್ಕಿ ರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯ ನಂತರ ಪರಾರಿಯಾಗಿದ್ದ ಆರೋಪಿ ಮಂಜುನಾಥ್ ನನ್ನು ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.
ಚಾಕು ಇರಿತಕ್ಕೊಳಗಾದ ಸೋಮನಗೌಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಕುರಿತು ಬೆಟಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.