ವಿಜಯಸಾಕ್ಷಿ ಸುದ್ದಿ, ನರಗುಂದ
ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಬುಧವಾರ ತುರ್ತು ಸಭೆ ನಡೆಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತಿ ಅಧ್ಯಕ್ಷ ಮುತ್ತು ರಾಯರಡ್ಡಿ ಮಾತನಾಡಿ, ರಾಜ್ಯಾದ್ಯಂತ ಕೋವಿಡ್ -19 ಮಹಾಮಾರಿ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಅಳವಡಿಸಿಕೊಳ್ಳುವಂತೆ ಗ್ರಾಮದ ಸಮಸ್ತ ಸಾರ್ವಜನಿಕರಲ್ಲಿ ಕೊವಿಡ್ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಪಿಡಿಒ ಶೈನಾಜ ಮುಜಾವರ ಮಾತನಾಡಿ, ಸಾರ್ವಜನಿಕರ ಸುರಕ್ಷತೆಗಾಗಿ ಮಹಾಮಾರಿ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವದು, ಆಗಾಗ ಕೈಗಳನ್ನು ಸ್ವಚ್ಛಗೊಳಿಸುವದನ್ನು ಜನರಲ್ಲಿ ತಿಳಿಸುವ ಜವಾಬ್ದಾರಿ ನಮ್ಮೆಲ್ಲರದು ಎಂದರು.

ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಲಕ್ಷ್ಮಣ ಕಂಬಳಿ, ಶರಣಪ್ಪ ಹಳೇಮನಿ, ಈರಮ್ಮ ಮುದಿಗೌಡ್ರ, ಶ್ರತಿ ಬ್ಯಾಳಿ, ಶೋಭಾ ಕೋಣನ್ನವರ, ಶಂಕ್ರಮ್ಮ ಚಲವಾದಿ, ಗ್ರಾಮ ಲೆಕ್ಕಾಧಿಕಾರಿ ದೊಡಮನಿ, ಆರೋಗ್ಯ ಇಲಾಖೆಯ ಶರಾವತಿ ಹಿರೇಮಠ ಮತ್ತು ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.