ವಿಜಯಸಾಕ್ಷಿ ಸುದ್ದಿ, ನರಗುಂದ:
Advertisement
ಚಾಲಕನ ನಿಯಂತ್ರಣ ತಪ್ಪಿ ಈರುಳ್ಳಿ ಹೇರಿದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ನಾಲ್ವರಿಗೆ ಗಾಯಗಳಾಗಿರುವ ಘಟನೆ ತಾಲೂಕಿನ ರಡ್ಡೆರ ನಾಗನೂರು ಗ್ರಾಮದಲ್ಲಿ ನಡೆದಿದೆ.

ಇದೇ ಗ್ರಾಮದ ಲಕ್ಷ್ಮವ್ವ (45) ಹಾಗೂ ಯಮನಮ್ಮ(60) ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ಗಾಯಗೊಂಡಿರುವ ನಾಲ್ವರು ನರಗುಂದ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮದ ಮುದ್ದಿಗೌಡ ಗದ್ದಿಗೌಡ್ರ ಎಂಬ ರೈತರ ಜಮೀನಿನಲ್ಲಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕರು ಈರುಳ್ಳಿ ಕಟಾವು ಮಾಡಿ ಹೇರಿಕೊಂಡು ಮರಳಿ ಮನೆಗೆ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಕಂದಕಕ್ಕೆ ಉರುಳಿದೆ.
ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.