HomeGadag Newsಜಾಗತಿಕ ಹಿರಿಯರ ದಿನಾಚರಣೆ

ಜಾಗತಿಕ ಹಿರಿಯರ ದಿನಾಚರಣೆ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನರಗುಂದ
ನರಗುಂದ ಪಟ್ಟಣದ ಬಾಬಾಸಾಹೇಬ ಭಾವೆ ಆರೋಗ್ಯ ಕೇಂದ್ರದಲ್ಲಿ ಅ. 16ರಂದು ಜಾಗತಿಕ ಹಿರಿಯರ ದಿನವನ್ನು ಆಚರಿಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಜಾಗೃತಿ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು. ಅನಂತರ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮವನ್ನು ತಹಸೀಲ್ದಾರ ಎ.ಎಚ್. ಮಹೇಂದ್ರ ಉದ್ಘಾಟಿಸಿದರು.
ತಹಸೀಲ್ದಾರರು ಮಾತನಾಡಿ, ಸರ್ಕಾರ ಹಿರಿಯರಿಗಾಗಿ ರೂಪಿಸಿರುವ ಯೋಜನೆಗಳ ಕುರಿತು ಗ್ರಾಮ ಮಟ್ಟದಲ್ಲಿ ಎಲ್ಲರಿಗೂ ಜಾಗೃತಿ ಮೂಡಿಸಬೇಕು. ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ತಾಲೂಕು ಆಸ್ಪತ್ರೆಯ ವೈದ್ಯಾಧಿಕಾರಿ ರೇಣುಕಾ ಕೊರವನವರ ಮಾತನಾಡಿ, ಇಲಾಖೆಯ ಆದೇಶದಂತೆ ಅ. 1ರಂದು ಜಾಗತಿಕ ಹಿರಿಯರ ದಿನವನ್ನು ಆಚರಿಸಲಾಗುತ್ತದೆ. ಈ ಮುಖಾಂತರ ಹಿರಿಯ ನಾಗರಿಕರಿಗಾಗಿ ನಮ್ಮ ಇಲಾಖೆಯಲ್ಲಿರುವ ಸೌಲಭ್ಯಗಳ ಕುರಿತು ಮತ್ತು ಹಿರಿಯರು ತಮ್ಮ ಆರೋಗ್ಯವನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಲು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಆಸ್ಪತ್ರೆಯ ಹಿರಿಯ ಆರೋಗ್ಯ ವಿಭಾಗದ ಶಿಕ್ಷಣಾಧಿಕಾರಿ ಜಿ.ವಿ. ಕೊಣ್ಣೂರ ಉಪನ್ಯಾಸ ನೀಡಿ, ವಯಸ್ಸಾದವರಲ್ಲಿ ಸಾಮಾನ್ಯವಾಗಿ ಕಂಡುಬರುವ ಸಮಸ್ಯೆಗಳು, ಅವುಗಳ ಪರಿಹಾರ ಹಾಗೂ ಮುಂಜಾಗ್ರತಾ ಕ್ರಮಗಳನ್ನು ವಿವರಿಸಿದರು,
ಭುವನೇಶ್ವರಿ ಕೆ. ಪ್ರಾರ್ಥನೆ ಗೀತೆ ಹಾಡಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಬಿ. ಜೋಶಿ ಸ್ವಾಗತಿಸಿದರು. ಎಂ.ಆರ್. ಕುಲಕರ್ಣಿ, ನಾಗರಾಜ ವಿಠಪ್ಪನವರ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ತಾಲೂಕು ಆರೋಗ್ಯಾಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!