ವಿಜಯಸಾಕ್ಷಿ ಸುದ್ದಿ, ಗದಗ
ರಾಜ್ಯ ಸರಕಾರದಿಂದ ಜಿಲ್ಲೆಯ ವಿವಿಧ
ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಕ್ಷೇತ್ರಗಳಿಗೆ ಘೋಷಣೆ ಮಾಡಿರುವ ಮೀಸಲಾತಿಯಲ್ಲಿ ಅಹಿಂದ ವರ್ಗಕ್ಕೆ ಅನ್ಯಾಯವಾಗಿದ್ದು, ಇದರ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲರ ಕೈವಾಡವಿದೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಸಂಯೋಜಕ ರಾಜು ಪೆಂಡಾರ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಪಂಚಾಯತಿಯ ಕೆಲ ಕ್ಷೇತ್ರಗಳಲ್ಲಿ ಮೀಸಲಾತಿ ಘೋಷಣೆಯಲ್ಲಿ ತಾರತಮ್ಯ ಮಾಡಲಾಗಿದೆ. ಲಕ್ಕುಂಡಿ, ಸೊರಟೂರು ಕ್ಷೇತ್ರ, ಕೋಟುಮಚಗಿ, ಕದಾಂಪೂರ, ಅಡವಿಸೋಮಾಪೂರ, ಹುಯಿಲಗೋಳ, ತಾಲೂಕು ಪಂಚಾಯತಿ ಕ್ಷೇತ್ರಗಳ ಮೀಸಲಾತಿ ಘೋಷಣೆಯಲ್ಲಿ ಅಹಿಂದ ವರ್ಗಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಪೆಂಡಾರ ದೂರಿದ್ದಾರೆ.
ಸಚಿವ ಸಿ ಸಿ ಪಾಟೀಲರು ಅಧಿಕಾರ ದುರುಪಯೋಗ ಮಾಡಿಕೊಂಡು ತಮಗೆ ಬೇಕಾದ ಹಾಗೆ ಮೀಸಲಾತಿ ಘೋಷಣೆ ಮಾಡಿಸಿದ್ದಾರೆ ಎಂದು ರಾಜು ಪೆಂಡಾರ ಆರೋಪಿಸಿದ್ದಾರೆ.