ವಿಜಯಸಾಕ್ಷಿ ಸುದ್ದಿ, ಗದಗ
ನಾಳೆಯಿಂದ ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆಯಾಗಿದೆ. ಹೀಗಾಗಿ ಜಿಲ್ಲೆಯ ಗಡಿಯಲ್ಲಿ ಚೆಕ್ ಪೋಸ್ಟ್ ಆರಂಭವಾಗಿವೆ. ಅಲ್ಲದೇ, ಜಿಲ್ಲೆಗಳಿಗೆ ಎಂಟ್ರಿಯಾಗುವವ ಮೇಲೆ ನಿಗಾ ಇಡಲಾಗಿದೆ. ಹೀಗಾಗಿ ಲಾಕ್ ಡೌನ್ ವಿಚಾರವಾಗಿ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಅವರು ಅಧಿಕಾರಿಗಳಿಗೆ ಹಲವು ವಿಷಯಗಳ ಕುರಿತು ನಿರ್ದೇಶನ ನೀಡಿದ್ದಾರೆ. ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮಗಳ ಸಭೆ ನಡೆಸಿ ಜಾಗೃತಿ ಮೂಡಿಸಲು ಸೂಚನೆ ನೀಡಿದ್ದಾರೆ.
ಧಾರ್ಮಿಕ ಕಾರ್ಯಗಳಲ್ಲಿ ಜನ ಭಾಗಿಯಾಗದಂತೆ ಕಟ್ಟು ನಿಟ್ಟಿನ ಕ್ರಮ ಸೂಚಿಸಲಾಗಿದೆ. ಹೊಸ ಮಾರ್ಗ ಸೂಚಿಯಂತೆ ಕಟ್ಟುನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗುವಂತ ಸೂಚಿಸಲಾಗಿದೆ. ಜಿಲ್ಲಾ ಪಂಚಾಯ್ತಿ ಅಧಿಕಾರಿಗಳಿಗೆ ತಂಡ ರಚಿಸಿ ಲಾಕ್ ಡಾನ್ ಯಶಸ್ವಿಗೊಳಿಸಲು ಸೂಚಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸೋಂಕಿತರಿಗೆ ಮೆಡಿಸಿನ್ ಕಿಟ್ ವಿತರಿಸಲು ಗ್ರಾಪಂ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಹೆಚ್ಚು ಸೋಂಕಿತರು ಇರುವ ಗ್ರಾಮಗಳಿಗೆ ತಹಶೀಲ್ದಾರ್, ಪೊಲೀಸರ ಸಹಾಯದಿಂದ ಸೌಕರ್ಯ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಪಿಡಿಒ ಸೇರಿದಂತೆ ಪಂಚಾಯತಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ವಿವಿಧ ಇಲಾಖೆಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.