ವಿಜಯಸಾಕ್ಷಿ ಸುದ್ದಿ, ಗದಗ
ಜೂನ್ ಒಂದರವರೆಗೂ ಇದ್ದ ಲಾಕ್ ಡೌನ್ 7 ನೇ ತಾರೀಖಿನವರೆಗೂ ಮುಂದುವರೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ್ ಹೇಳಿದ್ದಾರೆ.
ನಾಳೆ ಹಾಗೂ ನಾಡಿದ್ದು ಅಂದರೆ ಜೂನ್ 1 ಹಾಗೂ 2 ರಂದು ದಿನಸಿ ಖರೀದಿ, ಮಾಂಸ ಖರೀದಿಗೆ ಅವಕಾಶ ನೀಡಲಾಗಿದೆ ಎಂದ ಸಚಿವರು, ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಮಾತ್ರ ಅವಕಾಶ ನೀಡಲಾಗಿದ್ದು, ಅದರೊಳಗೆ ದಿನಸಿ ಖರೀದಿ ಮಾಡಬೇಕು ಎಂದರು. ಇನ್ನುಳಿದ ದಿನಗಳಲ್ಲಿ ಹೋಂಡಿಲೆವರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಜೂನ್ 7 ರವರೆಗೂ ಹಾಲು ಮೊಸರು ಖರೀದಿಗೆ ಪ್ರತಿದಿನ ಬೆಳಿಗ್ಗೆ 6 ರಿಂದ 8 ರವರೆಗೆ ಮಾತ್ರ ಅವಕಾಶ ಒದಗಿಸಲಾಗಿದೆ. ತರಕಾರಿ ಮಾರಾಟಕ್ಕೆ ತಳ್ಳುಗಾಡಿಯಲ್ಲಿ ಮಾತ್ರ ಅವಕಾಶ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಬ್ಯಾಂಕ್ ಹಾಗೂ ಅಂಚೆ ಕಚೇರಿಗಳಿಗೆ ಕೋವಿಡ್ ನಿಯಮಾವಳಿ ಪಾಲಿಸಿ ಬೆಳಿಗ್ಗೆ 10 ರಿಂದ 1 ಗಂಟೆಯವರೆಗೆ ಮಾತ್ರ ತೆರೆಯಲು ಅವಕಾಶವಿದೆ.
ಕೃಷಿ ಸಂಬಂಧಿತ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ರಿಂದ 12 ರವರೆಗೆ ಅವಕಾಶ ನೀಡಲಾಗಿದೆ.
ಜಿಲ್ಲೆಯ ಎಲ್ಲಾ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲೂ ಹೋಟೆಲ್ ಗಳು ಬಂದ್ ಇರಲಿವೆ.
ಜಿಲ್ಲೆಯ ಎಲ್ಲಾ ವೈನ್ ಶಾಪ್ ಬಾರ್ ರೆಸ್ಟೋರೆಂಟ್ ಗಳ ತೆರವಿಗೆ ಅನುಮತಿ ನೀಡಲಾಗಿಲ್ಲ ಎಂದರು.
ಈ ಮೊದಲೇ ಅನುಮತಿ ಪಡೆದ ಮದುವೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.