
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ವಿಷಯ ಚುರುಕು ಪಡೆದಿದೆ. ಈಚೆಗಷ್ಟೇ ವಿಮಾನ ನಿಲ್ದಾಣ ಜಾಗಕ್ಕೆ ಭೂಸ್ವಾಧೀನ ಪ್ರಕ್ರಿಯೆ ನಡೆಸಲು ಬೆಂಗಳೂರಿನಲ್ಲಿ ತೀರ್ಮಾನಿಸಲಾಗಿತ್ತು. ಈಗ ಈ ವಿಷಯಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಆಶಾಭಾವ ಮೂಡಿದೆ.
Advertisement
ಜನೇವರಿ 29ರಂದು ಕೊಪ್ಪಳಕ್ಕೆ ಕರ್ನಾಟಕ ಮೂಲಸೌಲಭ್ಯ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಡಾ.ಎಂ.ಆರ್.ರವಿ ಆಗಮಿಸಲಿದ್ದು, ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಜಾಗದ ಪರಿವೀಕ್ಷಣೆ ಮಾಡಲಿದ್ದಾರೆ. ನಂತರ ಅಂದು ಮಧ್ಯಾಹ್ನ 12-30ಕ್ಕೆ ಈ ವಿಷಯ ಕುರಿತಂತೆ ಜಿಲ್ಲಾಡಳಿತ ಭವನದಲ್ಲಿ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.