ವಿಜಯಸಾಕ್ಷಿ ಸುದ್ದಿ, ಡಂಬಳ;
ಮೆಕ್ಕೆಜೋಳ ತುಂಬಿಕೊಂಡು ಡಂಬಳ ಗ್ರಾಮಕ್ಕೆ ಹೊರಟಿದ್ದ ಟ್ರಾಕ್ಟರ್ ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಮೇತ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ.
ಸಮೀಪದ ಮುಂಡರಗಿ -ಮೇವುಂಡಿ ಮಧ್ಯ ಈ ದುರ್ಘಟನೆ ನಡೆದಿದೆ.
ಶಿವಾನಂದಯ್ಯ ಶಿವಲಿಂಗಯ್ಯ ಹಿರೇಮಠ, ತಾಯಿ ಅನಸೂಯಾ ಶಿವಲಿಂಗಯ್ಯ ಹಿರೇಮಠ (65) ಶಿವಾನಂದಯ್ಯ ನ ಪುತ್ರಿ 6 ವರ್ಷದ ನಮಸ್ವಿ ಮೃತ ದುರ್ಧೈವಿಗಳು. ಪತ್ನಿ ಗಿರಿಜಾ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಹುಬ್ಬಳ್ಳಿಗೆ ಹೊರಟಿತ್ತು ಎನ್ನಲಾಗಿದೆ. ಹುಬ್ಬಳ್ಳಿಯಿಂದ ಮುಂಡರಗಿ ತಾಲೂಕಿನ ಸಿಂಗಟಾಲೂರು ವೀರಭದ್ರೇಶ್ವರ ದೇವರು ದರ್ಶನ ಪಡೆದು ವಾಪಾಸು ಹೋಗುವಾಗ ಈ ದುರಂತ ಸಂಭವಿಸಿದೆ.

KA -25-AB 2702 ನಂಬರ್ ಇರೋ ಕಾರಿನಲ್ಲಿ ಇದ್ದವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮುಂಡರಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹುಬ್ಬಳ್ಳಿಯ ಅಮರಗೋಳ ಬಳಿಯ ಕೆಎಚ್ ಬಿ ಕಾಲೋನಿಯ ನಿವಾಸಿಗಳು ಎನ್ನಲಾಗಿದೆ. ಈ ಕುರಿತು ಮುಂಡರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.