ಟ್ರ್ಯಾಕ್ಟರ್-ಬೈಕ್ ಡಿಕ್ಕಿ: ಇಬ್ಬರ ಸಾವು

0
Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು

Advertisement

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಹುಣಸೂರು ತಾಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ಇಂದು ಮುಂಜಾನೆ ಜರುಗಿದೆ.

ಮೈಲಾಂಬೂರಿನ ಮಲ್ಲೇಗೌಡರ ಪುತ್ರ ರಾಜೇಗೌಡ (55), ಕೆ.ಆರ್.ನಗರ ತಾಲೂಕು ಮಾದಹಳ್ಳಿಯ ದೊಡ್ಡಸ್ವಾಮಿ ಗೌಡರ ಪುತ್ರ ರವಿ (35) ಮೃತರು.

ಹುಣಸೂರು ಕಡೆಯಿಂದ ದ್ವಿಚಕ್ರವಾಹನದಲ್ಲಿ ಗ್ರಾಮಕ್ಕೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here