ಡಂಗೂರ ಸಾರುವ ಮೂಲಕ ಕೊರೊನಾ ಜಾಗೃತಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಡಂಗೂರು ಸಾರುವ ಮೂಲಕ ಈ ಹಳ್ಳಿಯಲ್ಲಿ ಲಾಕ್ ಡೌನ್ ಜಾಗೃತಿ ಮೂಡಿಸಲಾಗಿದೆ. ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಈ ಕುರಿತು ಜಾಗೃತಿ ಮೂಡಿಸಲಾಗಿದೆ. ಡಂಗೂರ ಸಾರುವ ಮೂಲಕ ನಾಳೆಯ ಲಾಕ್ ಡೌನ್ ಬಗ್ಗೆ ಊರ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗಿದೆ.

ಈ ಗ್ರಾಮದಲ್ಲಿ ನಾಳೆ ಬೆಳಿಗ್ಗೆಯಿಂದ ಬೈಕ್ ಹಾಗೂ ವಾಹನ ಸವಾರಿ ಮಾಡುವಂತಿಲ್ಲ. ಬೆಳಗ್ಗೆ ಆರು ಗಂಟೆಯಿಂದ ಒಂಭತ್ತು ಗಂಟೆಯವರಿಗೆ ಮಾತ್ರ ಅಗತ್ಯ ವಸ್ತುಗಳನ್ನು ಕೊಳ್ಳಬೇಕು ಹಾಗೂ ಮಾರಾಟ ಮಾಡಬೇಕು. ಒಂಭತ್ತು ಗಂಟೆಯ ನಂತರ ಅಂಗಡಿ – ಮುಂಗಟ್ಟು ಬಂದ್ ಮಾಡಬೇಕು ಎಂದು ಜಾಗೃತಿ ಮೂಡಿಸಲಾಗಿದೆ.

ಒಂದು ವೇಳೆ ಅಂಗಡಿ – ಮುಂಗಟ್ಟು ಬಂದ್ ಮಾಡದಿದ್ದರೆ ಹಾಗೂ ವಾಹನಗಳನ್ನು ಬಳಕೆ ಮಾಡಿಕೊಂಡು ಗ್ರಾಮದಲ್ಲಿ ತಿರುಗಾಡಿದರೆ ಪೊಲೀಸರು ಕೇಸ್ ಹಾಕಲಿದ್ದಾರೆ ಎಂದು ಗ್ರಾಮದಲ್ಲಿ ಡಂಗೂರದ ಮೂಲಕ ಸಾರಲಾಗಿದೆ.


Spread the love

LEAVE A REPLY

Please enter your comment!
Please enter your name here