ವಿಜಯಸಾಕ್ಷಿ ಸುದ್ದಿ, ಗದಗ
ಗುತ್ತಿಗೆ ಅವಧಿಯನ್ನು ಮುಂದುವರಿಸಲು ಡಿ ಗ್ರೂಪ್ ನೌಕರರ ಹೆಚ್ಚಳವಾಗಿರುವ ಗೌರವಧನವನ್ನು ಲಂಚವಾಗಿ ಪಡೆಯುತ್ತಿದ್ದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಅಧೀಕ್ಷಕನನ್ನು ಡ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದಾರೆ.
ಜಿಲ್ಲಾಡಳಿತ ಭವನದಲ್ಲಿರುವ ಡಿಎಚ್ಒ ಕಚೇರಿಯಲ್ಲಿ ಬುಧವಾರ ಸಂಜೆ ಎಸಿಬಿ ಅಧಿಕಾರಿಗಳು, ಅಧೀಕ್ಷಕ ಶಿವಾನಂದ ಸಿಂದೋಗಿ ಎಂಬುವವರು 19 ಸಾವಿರ ರೂ.ಗಳ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಐದು ಜನ ಡಿ ಗ್ರೂಪ್ ನೌಕರರಿಗೆ ಈ ಹಿಂದೆ ನೀಡಿರುವ ಗೌರವಧನ ಹೆಚ್ಚಾಗಿದೆ. ಆ ಹೆಚ್ಚುವರಿ ಹಣ ಮರಳಿಸಬೇಕು ಹಾಗೂ ಒಪ್ಪಂದ ಮಾಡಿಕೊಂಡಿರುವ ಗುತ್ತಿಗೆ ಅವಧಿ ಮುಗಿಯಲು ಬಂದಿದ್ದು, ಅದೂ ಕೂಡ ಮುಂದುವರೆಯಬೇಕಾದರೆ ಹೆಚ್ಚಾದ ಹಣ ಕೊಡಲೇಬೇಕು ಎಂದು ಶಿವಾನಂದ ಸಿಂದೋಗಿ ಎಂಬುವವರು ಹಣ ಕೇಳಿದ್ದರು ಎನ್ನಲಾಗಿದೆ.

ಐದು ಜನರಲ್ಲಿ ಶಿರಹಟ್ಟಿ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಶಂಕ್ರಯ್ಯ ಸಾರಂಗಮಠ ಎಂಬುವವರು ಬುಧವಾರ ಸಂಜೆ 19 ಸಾವಿರ ಹಣ ಕೊಡುವಾಗ ಈ ದಾಳಿ ನಡೆದಿದೆ.
ಎಸಿಬಿ ಎಸ್ಪಿ ಬಿ ಎಸ್ ನೇಮಗೌಡ, ಡಿವೈಎಸ್ಪಿ ಎಂ ವಿ ಮಲ್ಲಾಪೂರ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಗಳಾದ ಆರ್ ಎಫ್ ದೇಸಾಯಿ, ವೀರೇಶ್ ಹಳ್ಳಿ, ಸಿಬ್ಬಂದಿಗಳಾದ ನಾರಾಯಣಗೌಡ್ ತಾಯಣ್ಣವರ್, ಎಮ್ ಎಮ್ ಅಯ್ಯನಗೌಡ್ರ, ಆರ್ ಎಸ್ ಹೆಬಸೂರ, ವೀರೇಶ್ ಜೋಳದ, ಶರೀಫ್ ಮುಲ್ಲಾ, ಮಂಜು ಮುಳಗುಂದ, ಐ ಸಿ ಜಾಲಿಹಾಳ, ಹಾಗೂ ಬಿಸಿನಳ್ಳಿ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.