HomeIndia Newsಡಿಕೆಶಿ ವಿರುದ್ಧ ಸಿದ್ದರಾಮಯ್ಯ ವ್ಯವಸ್ಥಿತ ಷಡ್ಯಂತ್ರ್ಯ: ಸಂಸದ ಪ್ರತಾಪ ಸಿಂಹ ಆರೋಪ

ಡಿಕೆಶಿ ವಿರುದ್ಧ ಸಿದ್ದರಾಮಯ್ಯ ವ್ಯವಸ್ಥಿತ ಷಡ್ಯಂತ್ರ್ಯ: ಸಂಸದ ಪ್ರತಾಪ ಸಿಂಹ ಆರೋಪ

Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು


ಡಿಕೆಶಿ ವಿರುದ್ಧದ ಆರೋಪ ಸಿದ್ದರಾಮಯ್ಯ ಅವರ ವ್ಯವಸ್ಥಿತವಾದ ಷಡ್ಯಂತ್ರ್ಯ ಎಂದು ಸಂಸದ ಪ್ರತಾಪ್ ಸಿಂಹ ಹೊಸ ಬಾಂಬ್ ಸಿಡಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿಯವರಿಂದ ಬಿಜೆಪಿ ಬಗ್ಗೆ ಮತ್ತಷ್ಟು ಒಳ್ಳೆಯ ಹೆಸರು ಬಂದಿದೆ. ಎರಡೂ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ. ಇದಕ್ಕೆ ವಿರೋಧ ಪಕ್ಷದವರೇ ಅನುಕೂಲ ಮಾಡಿಕೊಟ್ಟಿದ್ದಾರೆ. ಮಾಧ್ಯಮದವರ ಮುಂದೆಯೇ ಸಲೀಂ- ಉಗ್ರಪ್ಪ ಮಾತಾಡಿದ್ದಾರೆ. ಡಿಕೆಶಿಯವರನ್ನು ವ್ಯವಸ್ಥಿತವಾಗಿ ರಾಜಕೀಯವಾಗಿ ಮುಗಿಸುವ ಷಡ್ಯಂತ್ರ್ಯ ಎಂದು ದೂರಿದರು.

ಸಲೀಂ ಅವರು ಈಗಿರುವ ಸ್ಥಾನಕ್ಕೆ ಕಾರಣ ಡಿಕೆಶಿ. ಉಗ್ರಪ್ಪ ಸಂಸದರಾಗಲು ಅವರ ಪಾತ್ರ ಮಹತ್ವದ್ದು, ಆದರೆ, ಇಷ್ಟೆಲ್ಲ ಇದ್ದರೂ ಡಿಕೆಶಿಯವರನ್ನು ಟಾರ್ಗೆಟ್ ಮಾಡಲಾಗಿದೆ‌. ಇದಕ್ಕೆ ಸಿದ್ದರಾಮಯ್ಯ ನೇರ ಕಾರಣ ಎಂದರು.

‌ಹೀಗಾಗಿಯೇ ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯಗೆ ಬನ್ನಿ ಎಂದು ಹೈಕಮಾಂಡ್ ಹೇಳಿದೆ‌. ಇದರಿಂದ ಎಲ್ಲಿ ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕೆಂದು ಈ ರೀತಿ ಡಿಕೆಶಿ ಮೇಲೆ ಸಿದ್ದರಾಮಯ್ಯ ಷಡ್ಯಂತ್ರ್ಯ ಮಾಡಿದ್ದಾರೆ. ಇದು ಸಂಪೂರ್ಣ ಸಿದ್ದರಾಮಯ್ಯ ಅವರಿಂದಲೇ ನಡೆದಿರುವ ಷಡ್ಯಂತ್ರ್ಯ ಎಂದು ಪ್ರತಾಪ್ ಸಿಂಹ ಆರೋಪಿಸಿದರು.

ಸಿದ್ದರಾಮಯ್ಯ ಎಲಿಮೆನೆಟರಿ ಆಗಿ ಕೆಲಸ ಮಾಡುತ್ತಿದ್ದಾರೆ. ದೆಹಲಿಗೆ ಬನ್ನಿ ಎಂದಾಗ ಸಿದ್ದರಾಮಯ್ಯ ವಿಚಲಿತರಾಗಿ ಹೀಗೆ ಮಾಡಿಸಿದ್ದಾರೆ. ಇದರಿಂದ ಕಾಂಗ್ರೆಸ್ ಸಂಪೂರ್ಣವಾಗಿ ನಾಶವಾಗುತ್ತದೆ. ಅನಾಯಾಸವಾಗಿ ಇದರ ಲಾಭ ಬಿಜೆಪಿಗೆ ಬರಲಿದೆ ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!