ವಿಜಯಸಾಕ್ಷಿ ಸುದ್ದಿ, ಮೈಸೂರು:
Advertisement
ತಂದೆ ಹಾಗೂ ಆತನ ಜೊತೆಗಿದ್ದ ಮಹಿಳೆಯನ್ನು ಯುವಕ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮೈಸೂರು ನಗರದ ಶ್ರೀನಗರದಲ್ಲಿಂದು ಸಂಭವಿಸಿದೆ.
ಶಿವಪ್ರಕಾಶ್ (56) ಮತ್ತು ಲತಾ (48) ಕೊಲೆಯಾದವರು. ಕೊಲೆ ಮಾಡಿದ ಕೊಪ್ಪಲು ನಿವಾಸಿ ಸಾಗರ್ ತಲೆಮರೆಸಿಕೊಂಡಿದ್ದಾನೆ.
ಮೈಸೂರಿನ ಶ್ರೀನಗರದ ನಿವಾಸಿ ಲತಾ ಮನೆಗೆ ನುಗ್ಗಿ ಮೊದಲು ತಂದೆಯನ್ನು ನಂತರ ಲತಾಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಲತಾ ಮೇಲೆ ಹಲ್ಲೆಗೆ ಮುಂದಾದಾಗ ತಡೆಯಲು ಬಂದ ಲತಾ ಪುತ್ರ ನಾಗಾರ್ಜುನನಿಗೂ ಮಚ್ಚಿನಿಂದ ಹಲ್ಲೆ ಮಾಡಿದ್ದು, ಗಾಯಗೊಂಡಿರುವ ಈತನನ್ನು ಆಸ್ಪತ್ರೆಗೆ ದಾಖಲಾಗಿದೆ. ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.