ತಜ್ಞರ ಸಲಹೆ ಪಡೆದು 1-8 ತರಗತಿ ಆರಂಭಕ್ಕೆ ಚಿಂತನೆ: ಸಿಎಂ ಬೊಮ್ಮಾಯಿ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

1-8ನೇ ತರಗತಿ ಆರಂಭಿಸುವ ಬಗ್ಗೆಯೂ ತಜ್ಞರ ಸಲಹೆ ಕೇಳಿದ್ದೇವೆ. ಅವರ ಸಲಹೆ ಆಧರಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

9-12ನೇ ತರಗತಿ ಶಾಲಾ- ಕಾಲೇಜು ಆರಂಭ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕಾಲೇಜಿಗೆ ಭೇಟಿ ನೀಡಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು.

ವೇಳೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ ಸಿಎಂ ಆಫ್ ಲೈನ್ ಕ್ಲಾಸ್ ಬೇಕಾ ಅಥವಾ ಆನ್ ಲೈನ್ ಕ್ಲಾಸ್ ಉತ್ತಮವೇ ಎಂದು ಪ್ರಶ್ನಿಸಿದರು. ಆಫ್ ಲೈನ್ ಕ್ಲಾಸ್ ಬೇಕೆಂದಿರುವ ವಿದ್ಯಾರ್ಥಿಗಳು ಭೌತಿಕ ತರಗತಿಗಳು ಆರಂಭವಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದಿನಿಂದ ಶಾಲಾ-ಕಾಲೇಜುಗಳು ಆರಂಭವಾಗಿರುವುದರಿಂದ ವಿದ್ಯಾರ್ಥಿಗಳು ಅತ್ಯಂತ ಖುಷಿಯಿಂದ ಶಾಲೆಗೆ ಬಂದಿದ್ದಾರೆ. ಕೋವಿಡ್ ಕಡಿಮೆಯಾದರೆ ಗಡಿ ಜಿಲ್ಲೆಗಳಲಲ್ಲೂ ಶಾಲೆ ಆರಂಭಿಸಲಾಗುವುದು. ವಿದ್ಯಾರ್ಥಿಗಳು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.


Spread the love

LEAVE A REPLY

Please enter your comment!
Please enter your name here