HomeCrime Newsತಹಸೀಲ್ದಾರ ಮಜ್ಜಿಗಿ ದಾಳಿ; ಅಕ್ರಮ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಜಪ್ತಿ

ತಹಸೀಲ್ದಾರ ಮಜ್ಜಿಗಿ ದಾಳಿ; ಅಕ್ರಮ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ಜಪ್ತಿ

Spread the love

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ

ಅನಧಿಕೃತವಾಗಿ ಮುರಂ ಸಾಗಿಸುತ್ತಿದ್ದ ಟಿಪ್ಪರ್ ಗಳ ಮೇಲೆ ದಾಳಿ ಮಾಡಿದ ತಹಸೀಲ್ದಾರ ಜೆ ಬಿ ಮಜ್ಜಿಗಿ 5 ಟಿಪ್ಪರ್ ಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.

ತಾಲೂಕಿನ ಛಬ್ಬಿ ಗ್ರಾಮದ ಮುಖ್ಯರಸ್ತೆಯಲ್ಲಿ 5 ಟಿಪ್ಪರ್ ಗಳು ಪರವಾನಿಗೆ ಇಲ್ಲದೆ ಯಾವುದೇ ಸಕ್ಷಮ ಪ್ರಾಧಿಕಾರದಿಂದ ಅನುಮತಿಯನ್ನು ಪಡೆಯದೆ ಅನಧಿಕೃತವಾಗಿ ಮುರಂ ತುಂಬಿಕೊಂಡು ಸಾಗಾಣಿಕೆ ಮಾಡುತ್ತಿರುವುದು ಕಂಡುಬಂದಿದ್ದರಿಂದ ಈ ಐದು ಟಿಪ್ಪರ್ ಗಳನ್ನು ವಶಪಡಿಸಿಕೊಂಡು ಪೊಲೀಸರ ಸುಪರ್ದಿಗೆ ನೀಡಿದ್ದಾರೆ.

ಯಾವುದೇ ಪರವಾನಿಗೆ ಇಲ್ಲದೆ ಅನಧಿಕೃತವಾಗಿ ಮುರಂ ತುಂಬಿಕೊಂಡು ಸಾಗಾಣಿಕೆ ಮಾಡುತ್ತಿರುವಂತಹ ಐದು ಟಿಪ್ಪರ್ ಗಳಿಗೆ ನಿಯಮಾನುಸಾರ ದಂಡ ವಿಧಿಸಬೇಕೆಂದು ಗದಗನ ನ ಹಿರಿಯ ಭೂ ವಿಜ್ಞಾನಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ತಹಸೀಲ್ದಾರ್ ಪತ್ರವನ್ನು ಬರೆದಿದ್ದಾರೆ.

ಸರಕಾರದ ಬೊಕ್ಕಸಕ್ಕೆ ಅಪಾರ ನಷ್ಟ

ತಾಲೂಕಿನಾದ್ಯಂತ ವಿವಿಧ ರಸ್ತೆ ಕಾಮಗಾರಿಗಳಿ ಅನಧಿಕೃತವಾಗಿ ಮುರಂ ತುಂಬಿಕೊಂಡು ಹೋಗುವುದು ಸಾಮಾನ್ಯವಾಗಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟಾಗುತ್ತಿದ್ದರೂ ಸಹ ಇದನ್ನು ಯಾವೊಬ್ಬ ಅಧಿಕಾರಿಗಳು ತಡೆಯುವುದಕ್ಕೆ ಮುಂದಾಗಿರಲಿಲ್ಲ. ಇದೀಗ ತಹಸಿಲ್ದಾರ್ ಜೆ ಬಿ ಮಜ್ಜಿಗಿ ಸಾಹೇಬರ ನಡೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!