ತೇಜೋವಧೆ ಮಾಡಲು ನನ್ನ ವಿರುದ್ಧ ಷಡ್ಯಂತ್ರ: ಶಾಸಕ ರೇಣುಕಾಚಾರ್ಯ ಆರೋಪ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಯಾರೋ ಬ್ಲಾಕ್ ಮೇಲ್ ಮಾಡಿ ರೇಣುಕಾಚಾರ್ಯ ವಿಡಿಯೋ ಎಂದು ಹೆದರಿಸುತ್ತಿದ್ದಾರೆ ನಾನು ಯಾವುದೇ ಬ್ಲಾಕ್ ಮೇಲ್ ಖೆಡ್ಡಾಗೆ ಬೀಳಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ತಮ್ಮ ವಿರುದ್ಧದ ವಿಡಿಯೋ ಪ್ರಸಾರ ಮಾಡದಂತೆ ಮಧ್ಯಂತರ ತಡೆ ಕೋರಿ ಸಿಟಿ ಸಿವಿಲ್ ಕೋರ್ಟ್ ಮೊರೆ ಹೋದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಎಡಿಟ್ ಮಾಡಿ ಒಬ್ಬರ ಮುಖಕ್ಕೆ ಮತ್ತೊಬ್ಬರ ಮುಖ ಅಂಟಿಸಬಹುದು. ಯಾರೋ ಪುಣ್ಯಾತ್ಮ ನನ್ನ ವಿಡಿಯೋ ಎಂದು ಬ್ಲಾಕ್ ಮೇಲ್ ಮಾಡುತ್ತಿದ್ದಾನೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದಿದ್ದಾರೆ.

ನಾನು ಅಂದು ಒಮ್ಮೆ ತಪ್ಪು ಮಾಡಿದ್ದೆ. ಆ ತಪ್ಪಿನಿಂದ ಪಾಠ ಕಲಿತಿದ್ದೇನೆ. ನಡೆಯುವ ಮನುಷ್ಯ ಎಡವುದು ಸಹಜ. ಮತ್ತೆ ಎಂದೂ ಆ ತಪ್ಪು ಮಾಡಿಲ್ಲ. ಕೀಳುಮಟ್ಟದ ರಾಜಕಾರಣವನ್ನು ಸಹಿಸಲ್ಲ ಎಂದು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here