ದತ್ತ ಪೀಠದಲ್ಲಿ ಹಿಂದುಗಳ ಪೂಜೆಗೆ ಮುಕ್ತ ಅವಕಾಶ ನೀಡಿ

0
Spread the love

ವಿಜಯಸಾಕ್ಷಿ ಸುದ್ದಿ, ಚಿಕ್ಕಮಗಳೂರು

Advertisement

ದತ್ತ ಪೀಠವೇ ಬೇರೆ, ಬಾಬಾ ಬುಡನ್ ದರ್ಗಾನೇ ಬೇರೆ. ಇಲ್ಲಿ ಅನಗತ್ಯವಾಗಿ ನಿರ್ಮಿಸಿರುವ ದರ್ಗಾಗಳನ್ನು ನಾಗೇನಹಳ್ಳಿಗೆ ಸ್ಥಳಾಂತ ಮಾಡಿ. ದತ್ತ ಪೀಠವನ್ನು ಹಿಂದುಗಳಿಗೆ ಮುಕ್ತವಾಗಿ ಪೂಜೆಗೆ ಬಿಡುವಂತೆ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ‌.

ದತ್ತಪೀಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಸಲ್ಮಾನರು ಕಣ್ತೆರೆದು ನೋಡಬೇಕು. ನಾಗೇನಹಳ್ಳಿ ದರ್ಗಾ ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಹಿಂದಿನ ಸಿದ್ದರಾಮಯ್ಯ ಸರ್ಕಾರ ಹಿಂದುಗಳ ವಿರುದ್ಧ ನಿರ್ಣಯ ಕೈಗೊಂಡಿತ್ತು. ಸುಪ್ರೀಂಕೋರ್ಟ್ ಆದೇಶವಿದ್ದರೂ ಹಿಂದುಗಳಿಗೆ ಪೂಜೆಗೆ ಅವಕಾಶ ನೀಡಿರಲಿಲ್ಲ. ಸಮಿತಿ ರಚಿಸಿ ಮುಜಾವರ್ ರಿಂದ ಪೂಜೆಗೆ ಅವಕಾಶ ಮಾಡಿತ್ತು. ಹಿಂದಿನ ಸರ್ಕಾರದ ಮುಜಾವರ್ ನೇಮಕವನ್ನು ಹೈಕೋರ್ಟ್ ರದ್ದು ಮಾಡಿದೆ.

ದತ್ತ ಪೀಠದಲ್ಲಿ ಮುಜಾವರ್ ಪೂಜೆ ಮಾಡುವುದಲ್ಲ. ಹಿಂದು ಅರ್ಚಕರ ಮೂಲಕವೇ ಪೂಜೆ ಮಾಡಬೇಕೆಂಬ ರೂಪದಲ್ಲಿ ಆದೇಶ ನೀಡಿದೆ ಎಂದು ಹೇಳಿದರು.

ನಾನು ದತ್ತ ಪೀಠ ಹೋರಾಟದ ಮೂಲಕವೇ ಸಾರ್ವಜನಿಕ ಜೀವನಕ್ಕೆ ಬಂದವನು. ದತ್ತ ಪೀಠದಯ ಹೋರಾಟದಿಂದಲೇ ಜನಪ್ರತಿನಿಧಿಯಾಗಿ, ಮಂತ್ರಿಯಾಗುವ ಅವಕಾಶ ಸಿಕ್ಕಿದೆ. ಮತ್ತಷ್ಟು ಹಿಂದುತ್ವದ ಪರ ಕೆಲಸ ಮಾಡುವಂತೆ ಬೇಡಿಕೊಂಡಿದ್ದೇನೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here