ದೆಹಲಿಗೆ ಹಾರಿದ ಬೆಲ್ಲದ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬೇಗುದಿ ಬೂದಿಮುಚ್ಚಿದ ಕೆಂಡದಂತಿದ್ದು, ಆಗಾಗ ಬದಲಾವಣೆ ಕೂಗನ್ನು ಜೀವಂತವಾಗಿಡುವ ನಿಟ್ಟಿನಲ್ಲಿ ಪ್ರಯತ್ನಗಳು ಮುಂದುವರೆದಿವೆ. ಇದೀಗ ಸಚಿವ ಸಿ.ಪಿ. ಯೋಗೇಶ್ವರ್ ಬೆನ್ನಲ್ಲೇ ಶಾಸಕ ಅರವಿಂದ್ ಬೆಲ್ಲದ್ ಸಹ ದೆಹಲಿಗೆ ದೌಡಾಯಿಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಎರಡು ಮೂರು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದ ಸಚಿವ ಯೋಗೇಶ್ವರ್ ಇಂದು ರಾಜ್ಯಕ್ಕೆ ವಾಪಸ್ ಆಗಿದ್ದು, ಇದೀಗ ಶಾಸಕ ಅರವಿಂದ್ ಬೆಲ್ಲದ್ ದೆಹಲಿಗೆ ಪ್ರಯಾಣಿಸಿದ್ದಾರೆ. ಸಂಜೆ ವೇಳೆಗೆ ಹೈಕಮಾಂಡ್ ಭೇಟಿಯಾಗಿ ಚರ್ಚೆ ನಡೆಸಲಿದ್ದು, ಸರ್ಕಾರದ ಬಗ್ಗೆ ತಮ್ಮ ಅಸಮಾಧಾನವನ್ನು ಹೊರ ಹಾಕಲಿದ್ದಾರೆ ಎನ್ನಲಾಗಿದೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿ, ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಹಾಗೂ ಹಲವು ಗೊಂದಲಕ್ಕೆ ತೆರೆ ಎಳೆದು ಹೋಗಿದ್ದರೂ ತೆರೆ ಮರೆಯಲ್ಲಿ ಸಿಎಂ ಬದಲಾವಣೆ ಪ್ರಯತ್ನ ಮತ್ತೆ ಮುಂದುವರೆದಿದೆ.


Spread the love

LEAVE A REPLY

Please enter your comment!
Please enter your name here