ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಕ್ಷೀಣ…ಸಾವಿನಲ್ಲಿ ಹೆಚ್ಚು

0
Spread the love

ವಿಜಯಸಾಕ್ಷಿ ಸುದ್ದಿ, ನವದೆಹಲಿ

Advertisement

ದೇಶದಲ್ಲಿ ಮಹಾಮಾರಿಯ 2ನೇ ಅಲೆ ಇನ್ನೂ ಶಾಂತವಾಗುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಸೋಂಕಿತರ ಸಂಖ್ಯೆ ತುಸು ಇಳಿಕೆ ಕಂಡಿದ್ದರೂ ಸಾವಿನಲ್ಲಿ ಏರಿಕೆಯಾಗಿದೆ. ಈ ಸಂದರ್ಭದಲ್ಲಿ ದೇಶದಲ್ಲಿ 2,67,334 ಹೊಸ ಪ್ರಕರಣಗಳು ಪತ್ತೆಯಾಗಿವೆ. 4529 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆ ಕಂಡಿದೆ. ಅಲ್ಲದೇ, ಸಾವನ್ನಪ್ಪಿದವರ ಸಂಖ್ಯೆ 2,83,248ಕ್ಕೆ ತಲುಪಿದೆ.

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 32,26,719ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 3,89,851 ಜನ ಗುಣಮುಖರಾಗುವುದರೊಂದಿಗೆ ಇಲ್ಲಿಯವರೆಗೂ ಚೇತರಿಸಿಕೊಂಡವರ ಸಂಖ್ಯೆ 2,19,86,363ಕ್ಕೆ ತಲುಪಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 18,58,09,302 ಮಂದಿಗೆ ಲಸಿಕೆ ನೀಡಲಾಗಿದೆ.


Spread the love

LEAVE A REPLY

Please enter your comment!
Please enter your name here