ಧ್ವಜ ಸ್ತಂಬ ನೆಡುವಾಗ ವಿದ್ಯುತ್ ತಗುಲಿ‌ ಬಾಲಕ ಸಾವು

0
Spread the love

ವಿಜಯಸಾಕ್ಷಿ ಸುದ್ದಿ, ತುಮಕೂರು

Advertisement

ಧ್ವಜ ಸ್ತಂಭ ನಿಲ್ಲಿಸುವ ವೇಳೆ ಮೂವರಿಗೆ ವಿದ್ಯುತ್ ತಗುಲಿ, ಓರ್ವ ಬಾಲಕ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಕರೀಕೆರೆ ಗ್ರಾಮದಲ್ಲಿ ಸಂಭವಿಸಿದೆ.

ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲು ಧ್ವಜ ಸ್ತಂಬ ನಿಲ್ಲಿಸಲು ಹೋದಾಗ ಸ್ತಂಬಕ್ಕೆ ವಿದ್ಯುತ್ ತಂತಿ ತಗುಲಿ ಮೂವರಿಗೆ ಶಾಖ್ ಹೊಡೆದು ಅಸ್ವಸ್ಥರಾಗಿದ್ದಾರೆ.

ಆಸ್ಪತ್ರೆಗೆ ಸಾಗಿಸುವಾಗ 16 ವರ್ಷದ ಚಂದನ್ ಎಂಬ ಬಾಲಕ ಸಾವನ್ನಪ್ಪಿದ್ದಾನೆ. ಶಂಕರ್, ಪವನ್ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತ ಚಂದನ್ ತಂದೆ- ತಾಯಿಗೆ ಒಬ್ಬನೇ ಪುತ್ರ ಎಂದು ತಿಳಿದುಬಂದಿದೆ. ಮೂವರು ವಿದ್ಯಾರ್ಥಿಗಳು ಶಾಲೆಯ ಹಳೆಯ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

ಮೃತ ಬಾಲಕನ ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಈ ದುರ್ಘಟನೆಗೆ ಶಾಲಾ ಶಿಕ್ಷಕರ ನಿರ್ಲಕ್ಷವೇ ಕಾರಣ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here