ವಿಜಯಸಾಕ್ಷಿ ಸುದ್ದಿ, ಹಾಸನ
ಕೋಡಿಮಠದ ಶ್ರೀಗಳು ಭಯಾನಕ ಭವಿಷ್ಯ ನುಡಿದಿದ್ದಾರೆ. ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಬರಲಿದೆ ಎಂಬ ಭಯಾನಕ ಭವಿಷ್ಯ ನುಡಿದಿದ್ದಾರೆ. ಅರಸೀಕೆರೆಯ ಕೋಡಿಮಠದಲ್ಲಿ ಮಾತನಾಡಿದ ಶ್ರೀ, ಸದ್ಯ ದೇಶ ಕಾಡುತ್ತಿರುವ ಕೊರೊನಾ ದೂರವಾಗಲು ಸುಮಾರು 10 ವರ್ಷಗಳು ಬೇಕಾಗಬಹುದು. ಭೂಮಿಯಲ್ಲಿ ಈಗಾಗಲೇ ಕೋಟ್ಯಂತರ ಜನರ ಶವ ಹೂತು ಹಾಕಲಾಗಿದೆ. ಅದೇ ವಿಷವಾಗಿ ಭೂಮಿಯಿಂದ ಹೊರ ಬರಲಿದೆ. ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಮುಂದೆ ಬರಲಿದೆ ಎಂದು ಹೇಳಿದ್ದಾರೆ.
ಈ ರೋಗ ಕೊರೊನಾಕ್ಕಿಂತಲೂ ಭಯನಕವಾಗಿದೆ. ಈ ವರ್ಷ “ಕುಂಭದಿ ಗುರು ಬರಲು ತುಂಬುವವು ಕೆರೆ ಕಟ್ಟೆ, ಶಂಭುವಿನ ಪದಸಾಕ್ಷಿ ಡಂಬವೆನ್ನೆಲು ಬೇಡಿದೆನಾ’ ಅಂದರೆ, ಪ್ರಳಯದ ಮಳೆ ಆಗಲಿದೆ. ಮಿಂಚಿನಿಂದ ದುರ್ಯೋಗ ಇದೆ. ಜಗತ್ತಿನಲ್ಲಿ ಅಪಾಯಕಾರಿ ಘಟನೆಯೊಂದು ನಡೆಯಲಿದೆ. ಇದರ ಜೊತೆಗೆ ರಾಜಕೀಯ ಭೀತಿ ಎದುರಾಗಲಿದೆ. ಜಗತ್ತಿನಲ್ಲಿ ದೊಡ್ಡ ದೊಡ್ಡ ತಲೆಗಳು ಉರುಳಲಿವೆ” ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಸಾಮೂಹಿಕ ಸಾವುಗಳು ಸಂಭವಿಸಲಿವೆ. ಸತ್ತು ಹೂಳಲ್ಪಟ್ಟವರು ಕೂಡ ಮಾತನಾಡುತ್ತಾರೆ. ಅದನ್ನು ನೋಡಬಹುದು, ನೀವು ಅವರ ಜೊತೆ ಮಾತನಾಡಲು ಸಾಧ್ಯವಿಲ್ಲ. ಇಂಥ ಪ್ರೇತಾತ್ಮಗಳು ಸದ್ಯದಲ್ಲಿಯೇ ಕಂಡರೂ ಕಾಣಿಸದಂತಾಗುತ್ತದೆ. ಆದರೆ, ರಾಜ್ಯಕ್ಕೆ ಅಷ್ಟೊಂದು ದೊಡ್ಡ ಮಟ್ಟದ ತೊಂದರೆಗಳು ಆಗುವುದಿಲ್ಲ ಎಂದು ಹೇಳಿದ್ದಾರೆ.