ವಿಜಯಸಾಕ್ಷಿ ಸುದ್ದಿ, ನರಗುಂದ
Advertisement
ಹುಚ್ಚು ನಾಯಿಯೊಂದು ಸುಮಾರು 20ಕ್ಕೂ ಹೆಚ್ಚು ಜನರನ್ನು ಕಚ್ಚಿ ಗಾಯಗೊಳಿಸಿರುವ ಘಟನೆ ನರಗುಂದ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ವಿವಿಧ ಬೀದಿಯಲ್ಲಿ ಹುಚ್ಚು ನಾಯಿ ದಾಳಿ ನಡೆಸಿ ಗಾಯಗೊಳಿಸಿದೆ. ಸದ್ಯ ಗಾಯಾಳುಗಳು ನರಗುಂದ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಜನರು ಹುಚ್ಚು ನಾಯಿಯನ್ನು ಕಲ್ಲು ದೊಣ್ಣೆಯಿಂದ ಹೊಡೆದು ಸಾಯಿಸುವ ಮೂಲಕ ತಾತ್ಕಾಲಿಕ ಮುಕ್ತಿ ನೀಡಿದ್ದಾರೆ.

ಪುರಸಭೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಹೀಗಾಗಿ ನಾಯಿಗಳ ಉಪದ್ರವ ನಿಯಂತ್ರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.