ವಿಜಯಸಾಕ್ಷಿ ಸುದ್ದಿ, ಹಿರೇಕೆರೂರ:
ರಷ್ಯಾ ಶೆಲ್ ದಾಳಿಯಿಂದ ಉಕ್ರೇನ್ ನಲ್ಲಿ ಮೃತ ಪಟ್ಟ ವೈದ್ಯಕೀಯ ವಿದ್ಯಾರ್ಥಿ ಡಾ. ನವೀನ್ ಗ್ಯಾನಗೌಡ್ರ ಮೃತ ದೇಹ ಇಂದು ಮುಂಜಾನೆ ಅವರ ಸ್ವಗೃಹ ಹಾವೇರಿ ಜಿಲ್ಲೆ ರಾಣೇಬೆನ್ನೂರ್ ತಾಲ್ಲೂಕಿನ ಚಳಗೇರೆ ಗ್ರಾಮಕ್ಕೆ ಆಗಮಿಸಿದ್ದು, ಮಾಜಿ ಶಾಸಕ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು. ಬಿ. ಬಣಕಾರ್ ನವೀನ್ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.



