ವಿಜಯಸಾಕ್ಷಿ ಸುದ್ದಿ, ಗದಗ:
Advertisement
ಎಂಇಎಸ್ನ ಕೆಲವರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿರುವುದು ಖಂಡನೀಯ. ಶೀಘ್ರವೇ ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜನಶಕ್ತಿ ವೇದಿಕೆ ಅಧ್ಯಕ್ಷ ಸಯ್ಯದ್ ಖಾಲಿದ್ ಕೊಪ್ಪಳ ಆಗ್ರಹಿಸಿದ್ದಾರೆ.
ಬಹುಭಾಷಾ ಸಾಮರಸ್ಯ ಹೊಂದಿರುವುದು ಕನ್ನಡಿಗರ ದೌರ್ಬಲ್ಯವಲ್ಲ, ಇದು ಕನ್ನಡಿಗರ ಔದಾರ್ಯವಾಗಿದೆ. ಕೂಡಲೇ ಕನ್ನಡ ದ್ರೋಹಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಕೊಪ್ಪಳ ಒತ್ತಾಯಿಸಿದ್ದಾರೆ.