ನಾಳೆ ನಗರಕ್ಕೆ ಸಚಿವ ಲಕ್ಷ್ಮಣ ಸವದಿ ಭೇಟಿ: ನವೀಕೃತ ಬಸ್ ನಿಲ್ದಾಣ ಲೋಕಾರ್ಪಣೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಕಳೆದ ಕೆಲವು ತಿಂಗಳ ಹಿಂದೆಯೇ ಜನರ ಬಳಕೆಗೆ ಸಿದ್ದಗೊಂಡು ಜನಪ್ರತಿನಿಧಿಗಳ ಶೀತಲ ಸಮರದಿಂದ ಉದ್ಘಾಟನೆಗೊಳ್ಳದೆ ನೆನೆಗುದಿಗೆ ಬಿದ್ದಿದ್ದ ನಗರದ ನವೀಕೃತ ಹಳೆ ಬಸ್ ನಿಲ್ದಾಣಕ್ಕೆ ಅಂತೂ ಇಂತೂ ಉದ್ಘಾಟನೆ ಭಾಗ್ಯ ಕೂಡಿ ಬಂದಿದೆ.

ನಗರದ ಹೃದಯ ಭಾಗದಲ್ಲಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಗಾನಯೋಗಿ ಪಂಡಿತ ಪುಟ್ಟರಾಜ ಗವಾಯಿ ಬಸ್ ನಿಲ್ದಾಣವನ್ನು ನಾಳೆ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸುವರು.

ಕಳೆದ ಡಿ.24 ರಂದೇ ಬಸ್ ನಿಲ್ದಾಣ ಉದ್ಘಾಟನೆಗಾಗಿ ಸಿದ್ಧತೆ ನಡೆದಿತ್ತು. ಆಮಂತ್ರಣ ಪತ್ರಿಕೆಯನ್ನೂ ಮುದ್ರಿಸಲಾಗಿತ್ತು. ಆದರೆ, ಉದ್ಘಾಟನೆಗೆಂದೇ ಅಂದು ನಗರಕ್ಕೆ ಬಂದಿದ್ದ ಸಚಿವ ಲಕ್ಷ್ಮಣ ಸವದಿ ಲೋಕಾರ್ಪಣೆಗೊಳಿಸದೇ ಮರಳಿದ್ದರು.

ನವೀಕೃತ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡಬೇಕೆಂದು ಹಲವು ಸಂಘಟನೆಗಳು ಮನವಿ ಸಲ್ಲಿಸಿದ್ದರು.

ನಾಳೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕಪ್ಪತ ಉತ್ಸವ-೨೦೨೧ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಸಚಿವರಾದ ಸಿ.ಸಿ.ಪಾಟೀಲ್, ಅರವಿಂದ ಲಿಂಬಾವಳಿ ಹಾಗೂ ಆನಂದ್ ಸಿಂಗ್, ಶಾಸಕ ಎಚ್.ಕೆ.ಪಾಟೀಲ್ ಭಾಗವಹಿಸಲಿದ್ದು, ಈ ಕಾರಣಕ್ಕಾಗಿಯೇ ಬಸ್ ನಿಲ್ದಾಣ ಉದ್ಘಾಟನೆ ಆಗುವ ಭಾಗ್ಯ ದೊರೆತಿದೆ ಎಂದು ಹೇಳಲಾಗುತ್ತಿದೆ.


Spread the love

LEAVE A REPLY

Please enter your comment!
Please enter your name here