ವಿಜಯಸಾಕ್ಷಿ ಸುದ್ದಿ, ಚಿಕ್ಕಬಳ್ಳಾಪುರ
Advertisement
ಕೊರೊನಾ ಬಗ್ಗೆ ಮೈ ಮರೆತರೆ ಮತ್ತೆ ಲಾಕ್ಡೌನ್ ಮತ್ತು ನೈಟ್ ಕರ್ಫ್ಯೂ ಮುಂದುವರಿಸಬೇಕಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಆರೋಗ್ಯ ಸಚಿವರು, ದೇವಸ್ಥಾನ, ಮಾರುಕಟ್ಟೆಗಳಲ್ಲಿ
ಜನಜಂಗುಳಿ ಕಂಡುಬರುತ್ತಿದೆ. ಜನದಟ್ಟಣೆ ಕಂಡು ಭಯವಾಗುತ್ತಿದೆ. ಮದುವೆಗೆ 100 ಜನರಿಗೆ ಅನುಮತಿ ನೀಡಿದ್ದರೂ 500 ಜನರು ಸೇರುತ್ತಿದ್ದಾರೆ. ಕೊರೊನಾ 2ನೇ ಅಲೆ ಕಡಿಮೆ ಆಗಿದ್ದರೂ ಮೂರನೇ ಅಲೆ ಬರೋದಿಲ್ಲ ಅಂತೇನಿಲ್ಲ. ಆದರೂ ಜನರು ಮುನ್ನೆಚ್ಚರಿಕೆ ವಹಿಸದೇ ನಿರ್ಲಕ್ಷ್ಯ ತೋರಿಸುತ್ತಿರುವುದು ಕಳವಳ ಮೂಡಿಸುತ್ತಿದೆ ಎಂದರು.
ಲಸಿಕೆ ಹಾಕಿಸಿಕೊಂಡಿದ್ದೇವೆ ಎಂದು ಬೇಕಾಬಿಟ್ಟಿಯಾಗಿ ಓಡಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ರಾಜ್ಯದ ಜನತೆಗೆ ಆರೋಗ್ಯ ಸಚಿವರು ಎಚ್ಚರಿಕೆ ನೀಡಿದ್ದಾರೆ.