ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸೋಂಕಿನ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದೆ. ಇವತ್ತು 370 ಜನರಿಗೆ ಸೋಂಕು ತಗುಲಿದೆ.
ಇಂದಿನ 370 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 22428 ಕ್ಕೆ ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -158, ಮುಂಡರಗಿ-73, ನರಗುಂದ-25, ರೋಣ-65, ಶಿರಹಟ್ಟಿ-41, ಹೊರಜಿಲ್ಲೆಯ-08 ಸೇರಿದಂತೆ 370 ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ಐವರು ಮೃತಪಟ್ಟಿದ್ದು, ಮೃತರ ಸಂಖ್ಯೆ 231 ಕ್ಕೇರಿದೆ.
ಗದಗ ಶಹರದ ಟಿಪ್ಪು ಸುಲ್ತಾನ್ ಸರ್ಕಲ್ ಬಳಿಯ ನಿವಾಸಿ 65 ವರ್ಷದ ಮಹಿಳೆ ಮೇ-16 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಮೇ 20 ರಂದು ಮೃತಪಟ್ಟಿದ್ದಾರೆ.
ಗದಗ ತಾಲೂಕಿನ ಬೆಟಗೇರಿಯ ನಿವಾಸಿ 62 ವರ್ಷದ ವ್ಯಕ್ತಿ ಮೇ -23 ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಮೇ 23 ರಂದು ಮೃತಪಟ್ಟಿದ್ದಾರೆ.
ರೋಣ ತಾಲೂಕಿನ ನಿವಾಸಿ 54 ವರ್ಷದ ವ್ಯಕ್ತಿ ಮೇ 23 ರಂದು ನರಗುಂದ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 26 ರಂದು ಮೃತಪಟ್ಟಿದ್ದಾರೆ.
ಗದಗ ಶಹರದ ಒಕ್ಕಲಗೇರಿ ಓಣಿಯ ನಿವಾಸಿ 64 ವರ್ಷದ ಮಹಿಳೆ ಮೇ 16 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮೇ 26 ರಂದು ಮೃತಪಟ್ಟಿದ್ದಾರೆ.
ಗದಗ ತಾಲೂಕಿನ ಅಂತೂರ-ಬೆಂತೂರ ನಿವಾಸಿ 60 ವರ್ಷದ ವ್ಯಕ್ತಿ ಮೇ 22 ರಂದು ದಾಖಲಾಗಿದ್ದರು. ಅವರು ಮೇ 26 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು 401 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 19193 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 3004 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 185 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.