ನಿಲ್ಲುತ್ತಿಲ್ಲ ಸೋಂಕಿನ ಸ್ಫೋಟ; 530 ಜನರಿಗೆ ಸೋಂಕು, ಮತ್ತೆ ಐವರ ಸಾವು

0
Spread the love

ವಿಜಯಸಾಕ್ಷಿ ಸುದ್ದಿ, ಗದಗ

Advertisement

ಗದಗ ಜಿಲ್ಲೆಯಲ್ಲಿ ಸೋಂಕಿನ ಸ್ಫೋಟ ಮುಂದುವರೆದಿದೆ. ಹಳ್ಳಿ ಹಳ್ಳಿಗೂ ವ್ಯಾಪಿಸುತ್ತಿರುವ ಸೋಂಕು ದಿನದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುತ್ತದೆ.

ಇಂದಿನ 530 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 20315 ಕ್ಕೆ ಏರಿಕೆ ಕಂಡಿದೆ.

ಗದಗ ನಗರ ಹಾಗೂ ತಾಲೂಕಿನಲ್ಲಿ -217, ಮುಂಡರಗಿ-60, ನರಗುಂದ-38, ರೋಣ-104, ಶಿರಹಟ್ಟಿ-106, ಹೊರಜಿಲ್ಲೆಯ-05 ಸೇರಿದಂತೆ 530 ಪ್ರಕರಣಗಳು ದೃಢಪಟ್ಟಿವೆ.

ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ಐವರು ಮೃತಪಟ್ಟಿದ್ದು, ಮೃತರ ಸಂಖ್ಯೆ 207 ಕ್ಕೇರಿದೆ.

ರೋಣ ತಾಲೂಕಿನ ನರೇಗಲ್ ನಿವಾಸಿ 55 ವರ್ಷದ ಮಹಿಳೆ ಮೇ-13 ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಮೇ 15 ರಂದು ಮೃತಪಟ್ಟಿದ್ದಾರೆ.

ರೋಣ ತಾಲೂಕಿನ ಮುದೇನಗುಡಿ ನಿವಾಸಿ 63 ವರ್ಷದ ಮಹಿಳೆ ಮೇ -16 ರಂದು ರೋಣ ‌ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಮೇ 17 ರಂದು ಮೃತಪಟ್ಟಿದ್ದಾರೆ.

ಮುಂಡರಗಿ ತಾಲೂಕಿನ ಸಿಂಗಟಾಲೂರ ನಿವಾಸಿ 77 ವರ್ಷದ ವ್ಯಕ್ತಿ ಮೇ 15 ರಂದು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಮೇ 18 ರಂದು ಮೃತಪಟ್ಟಿದ್ದಾರೆ.

ಲಕ್ಷ್ಮೇಶ್ವರ ನಿವಾಸಿ 51 ವರ್ಷದ ವ್ಯಕ್ತಿ ಮೇ 18 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 19 ರಂದು ಮೃತಪಟ್ಟಿದ್ದಾರೆ.

ನರಗುಂದ ತಾಲೂಕಿನ ಚಿಕ್ಕ ನರಗುಂದ ನಿವಾಸಿ 68 ವರ್ಷದ ವ್ಯಕ್ತಿ ತಾಲೂಕು ಆಸ್ಪತ್ರೆಗೆ ಮೇ-18 ರಂದು ದಾಖಲಾಗಿದ್ದರು. ಇವರು ಮೇ -19 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು 400 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 16681 ಜನರು ‌ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.

ಇಂದು ಜಿಲ್ಲೆಯಲ್ಲಿ 3427 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ.

ಇನ್ನೂ 192 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here