ವಿಜಯಸಾಕ್ಷಿ ಸುದ್ದಿ, ಚಿತ್ರದುರ್ಗ
Advertisement
ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಗಟ್ಟೆ ಗ್ರಾಮದಲ್ಲಿ ನಡೆದಿದೆ. ಮಹಾಂತೇಶ (34), ಶೈಲಮ್ಮ (29) ಆತ್ಮಹತ್ಯೆಗೆ ಶರಣಾದ ದಂಪತಿ.
ನಿನ್ನೆ ಸಂಜೆ ಪತ್ನಿ ಶೈಲಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು. ಪತ್ನಿಯ ಸಾವಿನ ಬಳಿಕ ಮನನೊಂದು ಪತಿಯೂ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪಿಎಸ್ ಐ ಮಾರುತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.