22.8 C
Gadag
Saturday, December 9, 2023

ಪಕ್ಷದ ಸೂಚನೆಯಂತೆ ಗುರಿಕಾರ ಗೆಲುವಿಗೆ ಶ್ರಮ

Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ ಗಜೇಂದ್ರಗಡ
ಪಶ್ಚಿಮ ಪದವೀಧರರ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರಗೆ ಜೆಡಿಎಸ್ ಬೆಂಬಲ ಸೂಚಿಸಿದೆ. ಹೀಗಾಗಿ ಗುರಿಕಾರ ಅವರ ಗೆಲುವಿಗೆ ಶ್ರಮಿಸಲಾಗುವುದು ಎಂದು ಜೆಡಿಎಸ್ ಪಕ್ಷದ ತಾಲೂಕಾಧ್ಯಕ್ಷ ಎಂ.ವೈ.ಮುಧೋಳ ಹೇಳಿದರು.
ಈ ಕುರಿತು ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಳೆದ 6 ವರ್ಷಗಳಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ಸಾವಿರಾರು ಉದ್ಯೋಗ ಸೃಷ್ಠಿಸುತ್ತಿದ್ದ ಸಣ್ಣ ಕೈಗಾರಿಕೆಗಳು ಬಾಗಿಲು ಹಾಕಿ ರೈತರು ಹಾಗೂ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತ್ತ ದೇಶ ಕಟ್ಟುವ ಯುವಸಮೂಹ ಅದರಲ್ಲೂ ಪದವೀಧರರಿಗೆ ಉದ್ಯೋಗ ಸೃಷ್ಠಿಸುವಲ್ಲಿ ಮೋದಿ ನೇತೃತ್ವದ ಸರ್ಕಾರ ವಿಫಲವಾಗಿದೆ. ಪರಿಣಾಮ ನಿರುದ್ಯೋಗ ಪ್ರಮಾಣ ಹೆಚ್ಚಾಗಿ ಪದವೀಧರರು ಉದ್ಯೋಗವಿಲ್ಲದೆ ಪರದಾಡುತ್ತಿದ್ದರೆ, ಇತ್ತ ಸರ್ಕಾರಿ ಸಂಸ್ಥೆಗಳ ಖಾಸಗೀಕರಣ ಹಾಗೂ ಜಿಡಿಪಿ ಕುಸಿತದಿಂದಾಗಿ ಉದ್ಯೋಗ ಕಳೆದುಕೊಂಡು ಜನತೆ ಪರದಾಡುತ್ತಿದ್ದಾರೆ ಎಂದು ದೂರಿದ್ದಾರೆ.
ಪಶ್ಚಿಮ ಪದವೀಧರರ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಜೆಡಿಎಸ್ ಪಕ್ಷದ ವರಿಷ್ಠರು ಹಾಗೂ ಅಭ್ಯರ್ಥಿ ಶಿವಶಂಕರ ಕಲ್ಲೂರ ತಟಸ್ಥವಾಗಿ ಉಳಿಯುವ ಮೂಲಕ ಬೆಂಬಲ ನೀಡಿದ್ದಾರೆ. ಅಲ್ಲದೆ ಈ ಹಿಂದಿನ ಚುನಾವಣೆಯಲ್ಲಿ ನಮ್ಮ ಜಿಲ್ಲೆಯವರು ಎಂದು ಎಸ್.ವಿ. ಸಂಕನೂರು ಅವರಿಗೆ ಜಿಲ್ಲೆಯ ಪದವೀಧರರು ಬೆಂಬಲಿಸಿ ಗೆಲ್ಲಿಸಿದ್ದರು. ಆದರೆ ಸಂಕನೂರ ಅವರು ಪದವೀಧರರ ಸಮಸ್ಯೆಗಳ ಪರಿಹಾರ ಕಂಡುಕೊಳ್ಳುವಲ್ಲಿ ಸದನದ ಒಳಗೆ ಹಾಗೂ ಹೊರಗೆ ವಿಫಲವಾಗಿದ್ದಾರೆ.
ಪರಿಣಾಮ ಈ ಬಾರಿ ಪಶ್ಚಿಮ ಪದವೀಧರರ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಈಗಾಗಲೇ ಧಾರವಾಡ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಜನರ ನಂಬಿಕೆ ಹಾಗೂ ವಿಶ್ವಾಸಕ್ಕೆ ಘಾಸಿ ಮಾಡುತ್ತಿರುವ ಬಿಜೆಪಿಗೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲು ಹಾಗೂ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರನ್ನು ಗೆಲ್ಲಿಸಲು ತಾಲೂಕಿನ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಶ್ರಮಿಸಬೇಕೆಂದು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


Spread the love

Related Posts

LEAVE A REPLY

Please enter your comment!
Please enter your name here

Stay Connected

0FansLike

Latest Posts