ಪಕ್ಷ ನಮಗೆ ಅನ್ಯಾಯ ಮಾಡಲ್ಲ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ನಾವು ಪಕ್ಷ ಹಾಗೂ ಯಡಿಯೂರಪ್ಪನವರನ್ನು ನಂಬಿ ಬಿಜೆಪಿಗೆ ಬಂದವರು. ಹೀಗಾಗಿ ಪಕ್ಷದಿಂದ ನಮಗೆ ಯಾವುದೇ ರೀತಿ ಅನ್ಯಾಯ ಆಗಲ್ಲ ಎಂದು ಮಾಜಿ ಸಚಿವ ಶಿವರಾಮ್ ಹೆಬ್ಬಾರ ವಿಶ್ವಾಸ ವ್ಯಕ್ತಪಡಿಸಿದರು.

ನೂತನ ಸಿಎಂ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹೆಬ್ಬಾರ, ನೂತನ ಸಿಎಂ ಬೊಮ್ಮಾಯಿ ಹಾಗೂ ಯಡಿಯೂರಪ್ಪನವರು ಹೇಗೆ ತೀರ್ಮಾನ ಮಾಡುತ್ತಾರೋ ಅದರ ಮೇಲೆ ನಮ್ಮ ಸಚಿವ ಸ್ಥಾನ ನಿರ್ಧಾರವಾಗುತ್ತದೆ. ಆದರೆ ಪಕ್ಷ ನಮಗೆ ತೊಂದರೆ ಕೊಡುವುದಿಲ್ಲ ಎಂಬ ನಂಬಿಕೆ ಇದೆ ಎಂದರು.


Spread the love

LEAVE A REPLY

Please enter your comment!
Please enter your name here