ವಿಜಯಸಾಕ್ಷಿ ಸುದ್ದಿ, ಗದಗ
Advertisement
ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿವಾಹಿತ ಯುವಕನೊಬ್ಬ ಮಹಿಳೆ ಮತ್ತು ಆಕೆಯ ಪತಿಯ ಕಿರುಕುಳ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ರೋಣ ತಾಲೂಕಿನ ಕರಮುಡಿ ಗ್ರಾಮದಲ್ಲಿ ನಡೆದಿದೆ.
ಸ್ವಜಾತಿಯ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ಎನ್ನಲಾದ ಅರ್ಜುನ ಶಿವರಾಯಪ್ಪ ಚಲವಾದಿಯ ವರ್ತನೆಯಿಂದ ಬೇಸತ್ತು ಆತನ ಪತ್ನಿ ಲಕ್ಷ್ಮಿ ತವರು ಮನೆಗೆ ಮರಳಿದ್ದಳು. ಇನ್ನು, ವಿವಾಹಿತೆ ಹಾಗೂ ಆಕೆಯ ಪತಿ ನಿರಂತರ ಕಿರುಕುಳ ನೀಡುತ್ತಿದ್ದುದರಿಂದ ಬೇಸತ್ತು ಆತ ಮನೆಯಲ್ಲೇ ಪಂಚೆಯಿಂದ ನೇಣು ಹಾಕಿಕೊಂಡಿದ್ದಾನೆ ಎಂದು ಮೃತನ ಸಹೋದರ ಹನುಮಂತಪ್ಪ ಚಲವಾದಿ ರೋಣ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.