ಪಾನ್ ಉದ್ರಿ ಕೊಡದಿದ್ದಕ್ಕೆ ಚಾಕುವಿನಿಂದ ಇರಿದು ಅಂಗಡಿ ಮಾಲೀಕನ ಕೊಲೆ

0
Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ

Advertisement

ಕ್ಷುಲ್ಲಕ ಕಾರಣಕ್ಕಾಗಿ ಕುಂದಾಪುರ ಮೂಲದ
ಪಾನ್ ಶಾಪ್ ಅಂಗಡಿ ವ್ಯಾಪಾರಿಯನ್ನು ಕೊಲೆ ಮಾಡಿದ ಘಟನೆ ನಗರದ ವಡಗಾವಿ ಪ್ರದೇಶದ ಲಕ್ಷ್ಮೀ ನಗರದಲ್ಲಿ ನಡೆದಿದೆ.

ಮೂಲತಃ ಕುಂದಾಪುರದ ಬಾಳಕೃಷ್ಣ ಶೆಟ್ಟಿ ಮೃತ ವ್ಯಕ್ತಿ. ಈತ ಕಳೆದ 25 ವರ್ಷಗಳಿಂದ ಬೆಳಗಾವಿಯ ಲಕ್ಷ್ಮೀ ನಗರದಲ್ಲಿ ಪಾನ್ ಶಾಪ್ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ.

ವಡಗಾವಿಯ ದತ್ತಾ ಜತ್ತಿನಕಟ್ಟಿ ಎಂಬಾತ ದಿನನಿತ್ಯ ರಾತ್ರಿ ಬಾಳಕೃಷ್ಣನ ಅಂಗಡಿಗೆ ಬಂದು ಗುಟಖಾ, ಸಿಗರೇಟ್ ಉದ್ರಿ ಕೊಡುವಂತೆ ಪೀಡಿಸುತ್ತಿದ್ದ, ಉದ್ರಿ ಕೊಡದ ಕಾರಣ ಬಾಳಕೃಷ್ಣ ಶೆಟ್ಟಿಯ ಜೊತೆ ಜಗಳಾಡುತ್ತಿದ್ದ. ಆದರೆ, ನಿನ್ನೆ ರಾತ್ರಿ ಹೊಸ ಕ್ಯಾತೆ ತೆಗೆದ ದತ್ತಾ ನನ್ನ ಮೊಬೈಲ್ ಕಳುವಾಗಿದೆ. ಅದನ್ನು ನೀನೇ ತೆಗೆದುಕೊಡಿದ್ದಿ ಎಂದು ಜಗಳ ತೆಗದಿದ್ದಾನೆ. ಈತನ ಜೊತೆ ಜಗಳವೇ ಬೇಡ ಎಂದು ಬಾಳಕೃಷ್ಣ ಶೆಟ್ಟಿ ಪಾನ್ ಅಂಗಡಿ ಬಂದ್ ಮಾಡಿಕೊಂಡು ಮನೆಗೆ ಹೋಗಿದ್ದಾನೆ. ಅಷ್ಟಕ್ಕೂ ಸುಮ್ಮನಾಗದ ದತ್ತಾ ಬಾಳಕೃಷ್ಣನ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಬಾಳಕೃಷ್ಣನ ಆಪ್ತರು ತಿಳಿಸಿದ್ದಾರೆ.

ಆರೋಪಿ ದತ್ತಾ ಜತ್ತಿನಕಟ್ಟಿಯನ್ನು ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here