HomeKarnataka Newsಪೇಪರ್ ಸಿಂಹ ಆಗಬೇಡ ಎಂದು ಸಂಸದನಿಗೆ ಏಕ ವಚನದಲ್ಲಿಯೇ ಮಾತನಡಾದಿ ಜಿಟಿಡಿ!

ಪೇಪರ್ ಸಿಂಹ ಆಗಬೇಡ ಎಂದು ಸಂಸದನಿಗೆ ಏಕ ವಚನದಲ್ಲಿಯೇ ಮಾತನಡಾದಿ ಜಿಟಿಡಿ!

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಮೈಸೂರು

ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಶಾಸಕ ಜಿ.ಟಿ. ದೇವೇಗೌಡ ಅವರು ಏಕ ವಚನದಲ್ಲಿಯೇ ಗುಡುಗಿದ್ದಾರೆ.
ನಿನಗೆ ತಾಕತ್ತಿದ್ದರೆ ಡಿಸಿಯನ್ನು ವರ್ಗಾವಣೆ ಮಾಡಿಸು. ರೋಹಿಣಿ ಸಿಂಧೂರಿ ವಿರುದ್ದ ಪ್ರತಾಪ್‌ ಸಿಂಹ ಹೇಳಿಕೆ ಬೇಕಿತ್ತಾ? ಸುಖಾ ಸುಮ್ಮನೆ ಹಾದಿ ಬೀದಿಲಿ ನಿಂತು ಮಾತನಾಡಬೇಡ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಪೇಪರ್ ಟೈಗರ್ ಆಗುವುದು ಬೇಡ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಧಿಕಾರಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡಬೇಡಿ. ಜಿಲ್ಲೆಯ ಶಾಸಕರು ನಿನಗಿಂತಲೂ ಹೆಚ್ಚು ಕೆಲಸ ಮಾಡುತ್ತಿದ್ದಾರೆ. ಸ್ವಂತ ಹಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಸಂಸದನಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿರುವ ಲೆಕ್ಕ ಕೊಡು. ವೈಫಲ್ಯತೆ ಬಗ್ಗೆ ವಿರೋಧ ಪಕ್ಷದವರು ಮಾತನಾಡಬೇಕು. ಆಡಳಿತ ಪಕ್ಷದವರಲ್ಲ ಎಂದು ಗುಡುಗಿದ್ದಾರೆ.

ನೀನು ಪವರ್‌ ಫುಲ್ ಎಂಪಿ, ಪಿಎಂ, ಸಿಎಂ ನೀನು ಹೇಳಿದಂತೆ ಕೇಳುತ್ತಾರೆ. ತಾಕತ್ತಿದ್ದರೆ ಡಿಸಿಯನ್ನು ವರ್ಗಾವಣೆ ಮಾಡಿ ತೋರಿಸು. ಅದನ್ನು ಬಿಟ್ಟು ಪೇಪರ್‌ ಸ್ಟೇಟ್‌ ಮೆಂಟ್ ಕೊಟ್ಟು ಗೊಂದಲ ಏಕೆ ಮಾಡಿಸುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ಹೇಳಿಕೆ, ಆರೋಪಗಳ ಹಿಂದೆ ವೈಯುಕ್ತಿಕ ಸಮಸ್ಯೆ ಇದೆ ಎನಿಸುತ್ತಿದೆ. ನಿಮ್ಮ ಹೇಳಿಕೆಗಳು ಜನರಲ್ಲಿ ಅನುಮಾನ ಸೃಷ್ಟಿಸಿವೆ ಎಂದು ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!